ಕಲಬುರಗಿ| ಪೊಲೀಸರ ನೆರವಿನಿಂದ ಮನೆ ಸೇರಿದ ಮಾನಸಿಕ ಆಸ್ವಸ್ಥೆ

Date:

Share post:

ಕಲಬುರಗಿ: ಮಾನಸಿಕ ಆಸ್ವಸ್ಥಗೊಂಡು ಹುಚ್ಚಿಯಂತೆ ಅಲೆದಾಡುತ್ತಿದ್ದ ಆಶಾ ಕಾರ್ಯಕರ್ತೆಯೊಬ್ಬರು ಪೊಲೀಸರ ನೆರವಿನಿಂದ ಪೋಷಕರ ಮನೆ ಸೇರಿದ ಘಟನೆ ವಾಡಿ ಪಟ್ಟಣದಲ್ಲಿ ರವಿವಾರ ನಡೆದಿದೆ.

ಕಳೆದ 2 ತಿಂಗಳ ಹಿಂದೆ ಸಮೀಪದ ಹಲಕರ್ಟಿ ಗ್ರಾಮಕ್ಕೆ ಬಂದಿದ್ದ ರಾಯಚೂರು ತಾಲ್ಲೂಕಿನ ಇಡಪಾನೂರು ಗ್ರಾಮದ ಮಾನಸಿಕ ಆಸ್ವಸ್ಥ ಮಹಿಳೆ ನರಸಮ್ಮ ಬಸ್ ಸ್ಟಾಂಡ್ ನಲ್ಲಿಯೇ ವಾಸವಾಗಿದ್ದಳು. ಸ್ಥಳೀಯರು ಅನ್ನ ನೀರು ಹಾಗೂ ಬಟ್ಟೆ ಒದಗಿಸಿದ್ದರು. ಆದರೆ ಶನಿವಾರ ರಾತ್ರಿ ಬಟ್ಟೆ ಹರಿದ ಸ್ಥಿತಿಯಲ್ಲಿ ಮಹಿಳೆ ಕಂಡು ಬಂದಿದ್ದರಿಂದ ಸ್ಥಳೀಯರು ಪೊಲೀಸ್ ಠಾಣೆಗೆ ವರದಿ ನೀಡಿದ್ದರು.

ಕೂಡಲೇ ಸ್ಥಳಕ್ಕೆ ಆಗಮಿಸಿದ್ದ ಸಿಪಿಐ ಸಿದ್ದಬಸವನಗೌಡ ಪಿಎಸ್ಐ ತಿರುಮಲೇಶ ಕೆ. ಹಾಗೂ ರೇಣುಕಾ ಉಡಗಿ ಮಹಿಳೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಪೋಷಕರ ಪತ್ತೆಯಲ್ಲಿ ನಿರತರಾಗಿದ್ದರು.

ಇಡಪಾನೂರು ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಎಂದು ಗುರುತಿಸಿ ಪೋಷಕರ ಪತ್ತೆ ಹಚ್ಚಿ ಮಾಹಿತಿ ನೀಡಿದ್ದಾರೆ. ನಂತರ ತಡರಾತ್ರಿ ಠಾಣೆಗೆ ಬಂದ ಮಹಿಳೆಯ ಪೋಷಕರು ಮಹಿಳೆಯನ್ನು ಜತೆಯಲ್ಲಿ ಕರೆದುಕೊಂಡು ಹೋದರು.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಕೊರತೆ ಇಲ್ಲ: ಆಹಾರ ಇಲಾಖೆ ಡಿಡಿ ಸ್ಪಷ್ಟನೆ

ಕಲಬುರಗಿ: ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‍ಗಳು ಸಾಕಷ್ಟು ಪ್ರಮಾಣದಲ್ಲಿ...

ಕಲಬುರಗಿ| ಪಶು ವೈದ್ಯರನ್ನು ನೇಮಿಸಲು ಶಾಸಕ ಬಸವರಾಜ ಮತ್ತಿಮಡು ಆಗ್ರಹ

ಕಲಬುರಗಿ: ಗ್ರಾಮೀಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಪಶು ವೈದ್ಯಕಿಯ ಆಸ್ಪತ್ರೆಗಳಲ್ಲಿ ಪಶು...

ಕಲಬುರಗಿ ಮತ್ತು ಬೀದರ್‌ಗೆ ವಿಮಾನ ಸೇವೆ ಆರಂಭಿಸಲು ಸಂಸ್ಥೆಗಳಿಗೆ ಸಚಿವರ ಒತ್ತಾಯ

ಕಲಬುರಗಿ: ತೊಗರಿ ಕಣಜ ಕಲಬುರಗಿ ಮತ್ತು ಬೀದರ್‌ಗೆ ವಿಮಾನ ಸೇವೆ ಆರಂಭಿಸಬೇಕು...