ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಯುವ ಗಂಭೀರ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಫರಹತಾಬಾದ ಸಮೀಪ ಗುರುವಾರ ನಡೆದಿದೆ.
ಜೇವರ್ಗಿ ಪಟ್ಟಣದ ಲಕ್ಷ್ಮಿ ಚೌಕ್ ನಿವಾಸಿಗಳಾದ ಗಂಗಾರಾಮ ಶರಣಪ್ಪ(29) ಮೃತಪಟ್ಟ ದುರ್ದೈವಿಯಾಗಿದ್ದು, ತಿಪ್ಪಣ್ಣ ಸುಭಾಷ್ ಎಂಬಾತರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡಿರುವ ತಿಪ್ಪಣ್ಣ ಸುಭಾಷ್ ಅವರನ್ನು ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಸಂಚಾರಿ ಪೊಲೀಸ್ ಠಾಣೆ – 1 ರಲ್ಲಿ ಪ್ರಕರಣ ದಾಖಲಾಗಿದೆ.


