ಕಲಬುರಗಿ: ಗುಂಡಿನ ದಾಳಿ; ವ್ಯಕ್ತಿಯ ಭೀಕರ ಕೊಲೆ

Date:

Share post:

ಕಲಬುರಗಿ: ಬಲರಾಮ ಚೌಕ್ ನಿಂದ ವಾಡಿ ಪಟ್ಟಣಕ್ಕೆ ಸ್ಕೂಟಿ ಮೇಲೆ ಹೋಗುತ್ತಿದ್ದ ಯುವಕನೊಬ್ಬನನ್ನು ತಡೆದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸೋಮವಾರ ಮಧ್ಯಾಹ್ನ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.

ಭಾಯ್ ಭಾಯ್ ಗ್ರೂಪ್ ಅಧ್ಯಕ್ಷ ಮಹ್ಮದ್ ಇರ್ಫಾನ್ (40) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.

ಕೊಲೆಯಾದ ಇರ್ಫಾನ್ ಬಲರಾಮ ಚೌಕ್ ದಿಂದ ಸ್ಕೂಟಿ ಮೇಲೆ ವಾಡಿ ಪಟ್ಟಣಕ್ಕೆ ಬರುತ್ತಿದ್ದ ಎನ್ನಲಾಗಿದ್ದು, ಎದುರಿನಿಂದ ಶಿಫ್ಟ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ. ಸ್ಕೂಟಿಯಿಂದ ಕೆಳಗೆ ಬೀಳುತ್ತಿದ್ದಂತೆ ಗುಂಡು ಹಾರಿಸಿದ್ದಾರೆ. ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದಾಗ ಮಚ್ಚು ಮತ್ತು ಚಾಕುವಿನಿಂದ ಚುಚ್ಚಿ ಸಾಯಿಸಿದ್ದಾರೆ ಎನ್ನಲಾಗಿದೆ.

ಕೊಲೆಗೈದು ಕಾರಿನಲ್ಲಿ ಪರಾರಿಯಾಗಲು ಪ್ರಯತ್ನಿಸಿದ ಹಂತಕರು, ಆತುರದಲ್ಲಿ ಕಾರು ಗುಂಡಿಗೆ ಬಿದ್ದಿದೆ. ನಂತರ ಕೊಲೆಗೆ ಬಳಸಿದ ಕಾರು ಸ್ಥಳದಲ್ಲೇ ಬಿಟ್ಟು ಇನ್ನೊಂದು ಕಾರಿನಲ್ಲಿ ಫರಾರಿಯಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಕೊಲೆಗೆ ಹಳೆಯ ವೈಶ್ಯಮ್ಯವೇ ಕಾರಣ ಎನ್ನಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಡಿಐಜಿ ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣವರ್, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಎ.ಎಸ್.ಪಾಟೀಲ್, ಪಿಎಸ್ಐ ಕೆ.ತಿರುಮಲೇಶ, ಚಿತ್ತಾಪುರ ಪಿಎಸ್ಐ ಮಂಜುನಾಥ ರೆಡ್ಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ದೇಹ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...