ಕಲಬುರಗಿ| ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಜೆಸ್ಕಾಂ ಎಇಇ ಅಮೃತರಾವ್ ಯಲಾಲ್ ನಿವಾಸ ಮೇಲೆ ಲೋಕಾಯುಕ್ತ ದಾಳಿ

Date:

ಕಲಬುರಗಿ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಿಗ್ಗೆ ಜೆಸ್ಕಾಂ (ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಅಮೃತರಾವ್ ಯಲಾಲ್ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ಆರು ವಿಶೇಷ ತಂಡಗಳನ್ನು ರಚಿಸಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಲೋಕಾಯುಕ್ತ ಅಧಿಕಾರಿಗಳು ಕಲಬುರಗಿ ನಗರದ ಜಾಗೃತಿ ಕಾಲೋನಿಯಲ್ಲಿರುವ ನಿವಾಸ, ಸುಲೆಪೇಟ ನಲ್ಲಿರುವ ಮೂಲ ನಿವಾಸ, ಜಾಗೃತಿ ಕಾಲೋನಿಯ ಬಸವ ಅಪಾರ್ಟ್‌ಮೆಂಟ್‌ನಲ್ಲಿರುವ ಸುಮಾರು 40 ಫ್ಲಾಟ್‌ಗಳು, ಕೊತ್ತಂಬರಿ ಲೇಔಟ್‌ನಲ್ಲಿರುವ ಜೆಸ್ಕಾಂ ಕಚೇರಿ, ಜಾಗೃತಿ ಕಾಲೋನಿಯಲ್ಲಿರುವ ಮಾವನ ಮನೆ, ಹಾಗೂ ಸೇಡಂ ರಸ್ತೆಯ ಫೇಬರ್ ಪ್ಲಾಟಿನಂ ಸ್ಟುಡಿಯೋ ಸೇರಿದಂತೆ ಒಟ್ಟು ಆರು ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ಕಾರ್ಯಾಚರಣೆ ನಡೆಸಿದರು.

ಇದರ ಜೊತೆಗೆ, ನಂದೂರು ಕೈಗಾರಿಕಾ ಪ್ರದೇಶದಲ್ಲಿರುವ ಆಸ್ತಿಗಳು, ಕಲಬುರಗಿ ನಗರದಲ್ಲಿನ ಫ್ಲಾಟ್‌ಗಳು, ಸೂಳೆಪೇಟೆ ಭಾಗದಲ್ಲಿ ಅಂದಾಜು 15 ಎಕರೆ ಜಮೀನು ಹಾಗೂ ವಾಣಿಜ್ಯ ಮಳಿಗೆಗಳಿಗೆ ಸಂಬಂಧಿಸಿದ ದಾಖಲೆಗಳನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಶೋಧ ಕಾರ್ಯಾಚರಣೆ ವೇಳೆ ಆಸ್ತಿ ದಾಖಲೆಗಳು, ಬ್ಯಾಂಕ್ ವ್ಯವಹಾರಗಳು, ಹೂಡಿಕೆಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here

Share post:

spot_imgspot_img

Popular

More like this
Related

ಕಲಬುರಗಿ| ಗನ್‌ನಿಂದ ಗುಂಡು ಹಾರಿಸಿಕೊಂಡು ಸಿಎಆರ್ ಪೇದೆ ಆತ್ಮಹತ್ಯೆ

ಕಲಬುರಗಿ: ಕರ್ತವ್ಯ ನಿರತ ಸಿಎಆರ್ (ಸಶಸ್ತ್ರ ಮೀಸಲು ಪಡೆ) ಪೊಲೀಸ್ ಪೇದೆಯೊಬ್ಬರು...

ಕಲಬುರಗಿ: ಸಾರ್ವಜನಿಕರ ಅಹವಾಲು ಅಲಿಸಿದ‌ ಮುಖ್ಯಮಂತ್ರಿ ಡಿಕೆ ಶಿವಕುಮಾರ್ 

ಕಲಬುರಗಿ: ಕಲಬುರಗಿ‌ ವಿಭಾಗ ಮಟ್ಟದ ಬರ ಪರಿಸ್ಥಿತಿ ಅವಲೊಕಿಸಲು ಜಿಲ್ಲೆಗೆ ಅಗಮಿಸಿರುವ...

ಕಲಬುರಗಿ| “ರೈತರ ಸಾಲ ಮನ್ನಾ..”: ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಕಲಬುರಗಿ: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮನ್ನಾ...

ಕಲಬುರಗಿ| ಫೋನ್‌ಪೇ ಮೂಲಕ 15 ಸಾವಿರ ಪಡೆದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯ ಅನುದಾನ ಬಿಡುಗಡೆ ಮಾಡಲು...