Breaking: ಮತ್ತೆ ಬಿಜೆಪಿ ಸೇರಿದ ಜನಾರ್ದನ್ ರೆಡ್ಡಿ

Date:

Share post:

ಕೆಆರ್ ಪಿಪಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಜನಾರ್ದನ್ ರೆಡ್ಡಿ ಅವರು ಮತ್ತೆ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಆರ್ ಪಿಪಿ ಎಂಬ ಹೊಸ ಪಕ್ಷವನ್ನು ಸ್ಥಾಪಿಸಿ, ಗೆಲುವು ಸಾಧಿಸಿದ್ದರು. ಬಳಿಕ ಮತ್ತೆ ಬಿಜೆಪಿಗೆ ಸೇರುವುದು ಪಕ್ಕಾ ಎಂದು ಸುದ್ದಿ ಹರಿದಾಡಿತ್ತು. ಇವುಗಳ ಊಹಾಪೋಹಗಳಿಗೆ ಇಂದು ಅಂತ್ಯ ಹಾಡಿ ಕಮಲ ಹಿಡಿದಿದ್ದಾರೆ.

ನಿನ್ನೆಯಷ್ಟೇ ರೆಡ್ಡಿ ಅವರ ಮತ್ತೆ ಮಾತೃ ಪಕ್ಷ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿತ್ತು. ಇದಾದ ಬಳಿಕ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮತ್ತೆ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಶ್ರೀರಾಮುಲು ಸೇರಿದಂತೆ ಅನೇಕ ಬಿಜೆಪಿಯ ಹಿರಿಯ ನಾಯಕರು ಉಪಸ್ಥಿತರಿದ್ದರು. ಲೋಕಸಭಾ ಚುನಾವಣೆಗೆ ರೆಡ್ಡಿಯನ್ನು ಗಾಳ ಹಾಕಲಾಗಿದೆ ಎನ್ನಲಾಗುತ್ತಿದೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...