SSLC ಪರೀಕ್ಷೆಯಲ್ಲಿ ಅಕ್ರಮ.. ಇಬ್ಬರು ಮೇಲ್ವಿಚಾರಕರು ಅಮಾನತು 

Date:

Share post:

ಇಂದಿನಿಂದ ಎಸ್ಸೆಸೆಲ್ಸಿ ಪರೀಕ್ಷೆ ಶುರುವಾಗಿದ್ದು, ಮೊದಲ ದಿನವೇ ಲಕ್ಷಾಂತರ ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಈ ನಡುವೆ ಯಾದಗಿರಿಯಲ್ಲಿ ಹಲವೆಡೆ ನಕಲು ಮಾಡಿರುವ ಮಾಹಿತಿ ಎಲ್ಲೆಡೆ ಹರಿದಾಡಿದೆ.

ಅದರಂತೆಯೇ ಈ ಪರೀಕ್ಷೆಯ ಸಂದರ್ಭದಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಇದೇ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಅಲ್ಲಿನ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸುತ್ತಿದ್ದ ಸುರಪುರ ತಾಲೂಕಿನ ಏವೂರಿನ ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್ ಗೌಡ & ಸುರಪುರದ ಪರೀಕ್ಷಾ ಕೇಂದ್ರದಲ್ಲಿದ್ದ ಅಲ್ಲಿನ ಝಂಡದಕೇರ ಗ್ರಾಮದ ಶಿಕ್ಷಕ ಹನುಮಂತರಾಯ ಅವರನ್ನು ಅಮಾನತುಗೊಳಿಸಲಾಗಿದೆ.

ಎರಡು ಕಡೆಗಳಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಶಿಕ್ಷಕರು ಯಾವುದೇ ಕ್ರಮ ಕೈಗೊಂಡಿಲ್ಲ, ಈ ಕೃತ್ಯಕ್ಕೆ ಮೇಲ್ವಿಚಾರಕರು ನಿರ್ಲಕ್ಷ್ಯ ಮಾಡಿದ್ದಾರೆ. ಹಾಗಾಗಿ ಸಿಸಿ ಕ್ಯಾಮರಾ ದೃಶ್ಯ ಆಧರಿಸಿಕೊಂಡು ಅಲ್ಲಿನ ಜಿಲ್ಲಾ ಪಂಚಾಯ್ತಿಯ ಸಿಇಒ ಗರೀಮಾ ಪನ್ವಾರ್ ಅವರು ಇಬ್ಬರೂ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....