SSLC ಪರೀಕ್ಷೆಯಲ್ಲಿ ಅಕ್ರಮ.. ಇಬ್ಬರು ಮೇಲ್ವಿಚಾರಕರು ಅಮಾನತು 

Date:

Share post:

ಇಂದಿನಿಂದ ಎಸ್ಸೆಸೆಲ್ಸಿ ಪರೀಕ್ಷೆ ಶುರುವಾಗಿದ್ದು, ಮೊದಲ ದಿನವೇ ಲಕ್ಷಾಂತರ ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಈ ನಡುವೆ ಯಾದಗಿರಿಯಲ್ಲಿ ಹಲವೆಡೆ ನಕಲು ಮಾಡಿರುವ ಮಾಹಿತಿ ಎಲ್ಲೆಡೆ ಹರಿದಾಡಿದೆ.

ಅದರಂತೆಯೇ ಈ ಪರೀಕ್ಷೆಯ ಸಂದರ್ಭದಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಇದೇ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಅಲ್ಲಿನ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸುತ್ತಿದ್ದ ಸುರಪುರ ತಾಲೂಕಿನ ಏವೂರಿನ ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್ ಗೌಡ & ಸುರಪುರದ ಪರೀಕ್ಷಾ ಕೇಂದ್ರದಲ್ಲಿದ್ದ ಅಲ್ಲಿನ ಝಂಡದಕೇರ ಗ್ರಾಮದ ಶಿಕ್ಷಕ ಹನುಮಂತರಾಯ ಅವರನ್ನು ಅಮಾನತುಗೊಳಿಸಲಾಗಿದೆ.

ಎರಡು ಕಡೆಗಳಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಶಿಕ್ಷಕರು ಯಾವುದೇ ಕ್ರಮ ಕೈಗೊಂಡಿಲ್ಲ, ಈ ಕೃತ್ಯಕ್ಕೆ ಮೇಲ್ವಿಚಾರಕರು ನಿರ್ಲಕ್ಷ್ಯ ಮಾಡಿದ್ದಾರೆ. ಹಾಗಾಗಿ ಸಿಸಿ ಕ್ಯಾಮರಾ ದೃಶ್ಯ ಆಧರಿಸಿಕೊಂಡು ಅಲ್ಲಿನ ಜಿಲ್ಲಾ ಪಂಚಾಯ್ತಿಯ ಸಿಇಒ ಗರೀಮಾ ಪನ್ವಾರ್ ಅವರು ಇಬ್ಬರೂ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...