ರತನ್ ಟಾಟಾ ನಿಧನ: ಯುವಕರಿಂದ ಕ್ಯಾಂಡಲ್ ಮಾರ್ಚ್

Date:

Share post:

ಕಲಬುರಗಿ: ದೇಶದ ಖ್ಯಾತ ಉದ್ಯಮಿ, ಪದ್ಮವಿಭೂಷಣ ರತನ್ ಟಾಟಾ ಅವರ ನಿಧನರಾಗಿದ್ದರಿಂದ ನಗರದ ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತದ ಬಳಿ ನೂರಾರು ಯುವಕರು ಸೇರಿಕೊಂಡು ಕ್ಯಾಂಡಲ್ ಮಾರ್ಚ್ ಮೂಲಕ ಅಂತಿಮ ನಮನ ಸಲ್ಲಿಸಿದರು.

ಅಧಿಕ ಸಂಖ್ಯೆಯಲ್ಲಿ ಯುವಕರು ಸೇರಿದಂತೆ ನೂರಾರು ಅಭಿಮಾನಿಗಳು ದಿ.ಡಾ.ರತನ್ ಟಾಟಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ರತನ್ ಟಾಟಾ ಅವರ ಅಗಲಿಕೆ ಕಲಬುರಗಿಯಲ್ಲಿ ಜನರು ಮಮ್ಮಲು ಮರುಗಿದ್ದಾರೆ. ಟಾಟಾ ಅವರು ಸಾಕಷ್ಟು ಬಡವರಿಗೆ, ನಿರ್ಗತಿಕರಿಗೆ, ಸುರಿಲ್ಲದವರಿಗೆ ಅನ್ನ, ಶಿಕ್ಷಣ, ಉದ್ಯೋಗ ಹಾಗೂ ಆರೋಗ್ಯ ಸೇರಿ ಅನೇಕ ಸಾಮಾಜಿಕ ಕಾರ್ಯ ಮಾಡುವ ಮೂಲಕ ತಮ್ಮನ್ನು ತಾವು ದೇಶಕ್ಕಾಗಿ ಅರ್ಪಿಸಿಕೊಂಡಿದ್ದರು. ಅವರ ಅಗಲಿಕೆ ಅತೀವ ನೋವು ಉಂಟು ಮಾಡಿದೆ ಎಂದು ಅಭಿಮಾನಿಗಳು ನೋವು ಹಂಚಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಪೃಥ್ವಿಕುಮಾರ್ ಉತ್ನಾಳಕರ್, ಗುಂಡು ಪಾಟೀಲ್, ಸೂರಿ ಪಾಟೀಲ್ ಮಂದೇವಾಲ್, ಸಚಿನ್ ಎಳಮನಿ, ಅಮಿತ್ ಸಾಲಿಮಠ, ವಿನೋದ್ ಬಿರಾದಾರ್, ದರ್ಶನ್ ವಂಟಿ, ಶ್ರೀಕಾಂತ್ ಗೊಬ್ಬುರಕರ್, ಅಭಿಷೇಕ್ ಗೊಬ್ಬುರ್, ದೇವರಾಜ್ ಬಿರಾದಾರ್, ಮೌನೇಶ್ ಸೇರಿ ಅನೇಕರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...

ಕಲಬುರಗಿ| ವ್ಯಕ್ತಿಯನ್ನು ಕಿಡ್ನಾಪ್ ಮಾಡಿ ಹತ್ಯೆಗೈದು ನದಿಗೆ ಎಸೆದಿದ್ದ ಮೂವರ ಆರೋಪಿಗಳ ಬಂಧನ: ಪೊಲೀಸ್ ಕಮಿಷನರ್

ಕಲಬುರಗಿ: ವ್ಯಕ್ತಿಯೊಬ್ಬ ಕಾಣೆಯಾದ ಪ್ರಕರಣ ದಾಖಲಿಸಿಕೊಂಡ ಸ್ಟೇಶನ್ ಬಜಾರ್ ಪೊಲೀಸರು, ಕ್ಷೀಪ್ರ...