ಸಿಎಂ ಬದಲಾವಣೆ ಕೇವಲ ಊಹಾಪೋಹ: ಸಚಿವ ಪಾಟೀಲ್

Date:

Share post:

ಕಲಬುರಗಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ಊಹಾಪೋಹ ಯಾರು ಯಾರಿಗಾದರೂ ಭೇಟಿಯಾಗುವುದು ಬಿಡೋದು ಅವರ ವೈಯಕ್ತಿಕ ವಿಚಾರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.

ನಗರದಲ್ಲಿ ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೋಳಿ ಮೈಸೂರಿನಲ್ಲಿ ಸೌಜನ್ಯಯುತವಾಗಿ ಕೆಲ ನಾಯಕರನ್ನು ಭೇಟಿಯಾಗಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಹೊಡೆತ ಎಂಬ ಶಾಸಕ ರಾಜು ಕಾಗೆ ಹೇಳಿಕೆ ವೈಯಕ್ತಿಕವಾಗಿದ್ದು, ಅದನ್ನು ವೈಭವಿಕರಿಸುವ ಅಗತ್ಯವಿಲ್ಲ ಎಂದರು.

ಬಳಿಕ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದ ವಿಚಾರ ಪ್ರತಿಕ್ರಿಯಿಸಿದ ಅವರು, ಕೇಸ್‌ಗಳನ್ನ ವಾಪಸ್ ಪಡೆಯೋದು ಸರ್ಕಾರದ ಮಟ್ಟದಲ್ಲಿ ನಡೆಯುವ ಒಂದು ಪ್ರಕ್ರಿಯೆ. ಯಾರೋ ಹೇಳ್ತಾರೆ ಅಂತ ಸರ್ಕಾರ ಕೇಸ್ ವಾಪಸ್ ಪಡೆಯವುದಿಲ್ಲ, ಕ್ಯಾಬಿನೆಟ್ ಸಬ್ ಕಮಿಟಿಯಲ್ಲಿ ಚರ್ಚೆ ನಡೆದ ಬಳಿಕ ಕೇಸ್ ವಾಪಸ್ ಬಗ್ಗೆ ಸರ್ಕಾರ ನಿರ್ಧರಿಸಿದೆ. ಸಂಬಂಧವಿಲ್ಲದ, ನಿರಾಪರಾಧಿಗಳ ಮೇಲಿನ ಕೇಸ್ ವಾಪಸ್ ಪಡೆಯಲಾಗಿದೆ. ಈ

ಗಲಭೆಯಲ್ಲಿ ಸಾಕಷ್ಟು ಜನ ಅಮಾಯಕರು ಸಿಲುಕಿಕೊಂಡಿದ್ದರು. ಅಂತವರ ಮೇಲೆ ಸಹ ಆ ಸಂದರ್ಭದಲ್ಲಿ ಕೇಸ್ ಹಾಕಲಾಗಿತ್ತು. ಹುಬ್ಬಳ್ಳಿ ಗಲಭೆ ಪ್ರಕರಣ ಒಂದೇ ಅಲ್ಲ, ವಿವಿಧ ಪ್ರಕರಣಗಳಲ್ಲಿ 43 ಕೇಸ್‌ಗಳನ್ನ ವಾಪಸ್ ಪಡೆಯಲಾಗಿದೆ ಎಂದು ತಿಳಿಸಿದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...