ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪ್ರೇರಣೆ: ಆಯುಕ್ತ ರವೀಂದ್ರ

Date:

Share post:

ಕಲಬುರಗಿ: ಸಾಹಿತ್ಯ ಮನುಷ್ಯತ್ವ, ಮೋಕ್ಷ ಮತ್ತು ಸಂಬoಧಗಳ ಬೆಸುಗೆಯಾಗಿ ಹೊಸ ಭಾಷ್ಯ ಬರೆಯುತ್ತದೆ. ಜತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಪ್ರೇರಣೆರ ನೀಡುತ್ತದೆ ಎಂದು ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಆಯುಕ್ತರಾದ ರವೀಂದ್ರ ಢಾಕಪ್ಪ ಹೇಳಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಗೌರವ ಪುರಸ್ಕಾರ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ನಾಡಿನ ಸಾಹಿತಿಗಳ ಆಚಾರ ವಿಚಾರಗಳು ನಮ್ಮ ಮೇಲೆ ಪ್ರಭಾವ ಬೀರಬೇಕಾದರೆ, ಸಾಹಿತ್ಯ ಕೃತಿಗಳನ್ನು ಹೆಚ್ಚು ಓದಬೇಕು. ಕುವೆಂಪು, ದ.ರಾ. ಬೇಂದ್ರೆ ಮತ್ತಿತರರ ಕಾವ್ಯ ಸ್ಪೂರ್ತಿ ದೊರೆಯಬೇಕಾಗಿದೆ. ಅವರನ್ನು ತುಂಬಾ ಹತ್ತಿರದಿಂದ ನೋಡಿ ಖುಷಿ ಪಡಲಾಗಿದೆ. ನುಡಿದಂತೆ ನಡೆದಾಗ ಇಂಥ ಕಾರ್ಯಕ್ರಮಗಳು ಯಶಸ್ವಿಗೊಳ್ಳುತ್ತವೆ. ಕವಿಗಳಿಗೆ ಭಾವ ಜೀವ ತುಂಬುತ್ತದೆ ಎಂದ ಅವರು, ಈ ನಿಟ್ಟಿನಲ್ಲಿ ಪರಿಷತ್ತು ಜಿಲ್ಲೆಯಲ್ಲಿ ನವೆಂಬರ್ ತಿಂಗಳಾದ್ಯoತ ವೈವಿಧ್ಯಮಯ ಕಾರ್ಯಕ್ರಮಗಳು ರೂಪಿಸುವ ಮೂಲಕ ಹೊಸ ಪೀಳಿಗೆಯಲ್ಲಿ ಹೊಸ ಚೈತನ್ಯವನ್ನು ತುಂಬಿದoತಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ತೊನಸನಹಳ್ಳಿಯ ಅಲ್ಲಮಪ್ರಭು ಪೀಠದ ಡಾ. ಮಲ್ಲಣ್ಣಪ್ಪ ಮಹಾಸ್ವಾಮಿಗಳು, ಮನುಷ್ಯನ ಬದುಕಿನಲ್ಲಿ ಭಾಷೆ ಬಹು ಮುಖ್ಯ ಪಾತ್ರವನ್ನು ವಹಿಸುತ್ತಿದೆ. ಇದು ನಾವು-ನಮ್ಮವರು ಎಂಬ ಭಾವನೆ ಮೂಡಿಸಿ ಮನುಷ್ಯನ ಬದುಕನ್ನು ಬೆಸೆಯುವ ಒಂದು ಕೊಂಡಿಯಾಗಿದ್ದು, ಕನ್ನಡ ನಾಡು-ನುಡಿ ಮತ್ತು ಭಾಷೆ ಕಟ್ಟುವ ಕಾರ್ಯದಲ್ಲಿ ಇಲ್ಲಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿರಂತರ ಸೇವೆ ಮಾಡುತ್ತಿದೆ. ಪರಿಷತ್ತು ಹಮ್ಮಿಕೊಳ್ಳುತ್ತಿರುವ ಹೊಸ ಪ್ರಯೋಗದ ಕಾರ್ಯಕ್ರಮಗಳು ಎಲ್ಲರಿಗೂ ಮಾದರಿಯಾಗಿವೆ ಎಂದು ಬಣ್ಣಿಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕನ್ನಡ ವಿಶ್ವದ ಅತ್ಯಂತ ಶ್ರೀಮಂತ ಭಾಷೆಯಾಗಿದೆ. ಇದು ನಮ್ಮ ಬದುಕು ಕಟ್ಟಿಕೊಡುವ ಜೀವಂತ ಭಾಷೆಯಾಗಿದ್ದು, ನಮ್ಮ ನಾಡಿನ ಸಂಸ್ಕೃತಿಯ ಪ್ರತೀಕವಾಗಿದೆ. ಇದನ್ನು ಪ್ರೀತಿಸುವದರೊಂದಿಗೆ ಉಳಿಸಿ ಬೆಳೆಸುವ ಕಾರ್ಯ ನಾವೆಲ್ಲರೂ ಮಾಡಬೇಕಾಗಿದೆ. ಕನ್ನಡ ಕಟ್ಟುವ ಕಾಯಕದಲ್ಲಿ ಪರಿಷತ್ತು ಜಿಲ್ಲೆಯಲ್ಲಿ ಅವಿರತವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು.

ಪಿಡಿಎ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಬಾಬುರಾವ ಶೇರಿಕಾರ, ಹಿರಿಯ ಲೇಖಕಿ ಡಾ. ಇಂದುಮತಿ ಪಾಟೀಲ ಮಾತನಾಡಿದರು.

ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪ್ರಮುಖರಾದ ಸಿದ್ಧಲಿಂಗ ಬಾಳಿ, ಶಿಲ್ಪಾ ಜೋಶಿ, ರಾಜೇಂದ್ರ ಮಾಡಬೂಳ, ಗಣೇಶ ಚಿನ್ನಾಕಾರ, ಡಾ. ರೆಹಮಾನ್ ಪಟೇಲ್, ರವೀಂದ್ರಕುಮಾರ ಭಂಟನಳ್ಳಿ, ಧರ್ಮರಾಜ ಜವಳಿ, ಶಕುಂತಲಾ ಪಾಟೀಲ, ರಮೇಶ ಡಿ ಬಡಿಗೇರ, ಕಲ್ಯಾಣಕುಮಾರ ಶೀಲವಂತ, ಜಗದೀಶ ಮರಪಳ್ಳಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...