ಕಲಬುರಗಿ| ಟ್ರಾಫಿಕ್ ಪೊಲೀಸರಿಗೆ ಹವಾ ನಿಯಂತ್ರಿತ ಹೆಲ್ಮೆಟ್ ವಿತರಣೆ

Date:

Share post:

ಕಲಬುರಗಿ: ಬಿಸಿಲಿನಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಯವರ ಹಿತ ರಕ್ಷಣೆ ದೃಷ್ಟಿಯಿಂದ ರಾಜ್ಯದಲ್ಲಿ ಪ್ರಥಮ ಬಾರಿಗೆ ಕಲಬುರಗಿ ನಗರ ಪೊಲೀಸ್ ವತಿಯಿಂದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯವರಿಗೆ ಹವಾ ನಿಯಂತ್ರಿತ(ಎ.ಸಿ)ಹೆಲ್ಮೆಟ್ ವಿತರಿಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಡಾ. ಶರಣಪ್ಪ ಎಸ್.ಡಿ ಹೇಳಿದರು.

ನಗರದ ಪೊಲೀಸ್ ಆಯುಕ್ತಾಲಯದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೊದಲ ಹಂತವಾಗಿ 10 ಹವಾ ನಿಯಂತ್ರಿತ ಹೆಲ್ಮೆಟ್, 10 ಪೊಲ್ಲ್ಯೂಷನ್ ಕಂಟ್ರೋಲ್ ಮಾಸ್ಕ್, 140 ಮಿಂಚುವ ಜಾಕೆಟ್, ರಾತ್ರಿ ಸಮಯದಲ್ಲಿ ಕರ್ತವ್ಯ ನಿರ್ವಹಿಸಲು 150 ಬ್ಯಾಟನ್ ಗಳನ್ನು ವಿತರಿಸಲಾಗಿದೆ ಎಂದರು.

ಕಲಬುರಗಿಯಲ್ಲಿ ತಾಪಮಾನ, ವಾಯು ಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆ ಟ್ರಾಫಿಕ್ ಸಿಬ್ಬಂದಿಯವರ ಆರೋಗ್ಯದ ಹಿತದೃಷ್ಟಿಯಿಂದ ಅವರಿಗೆ ಮೊದಲಾದ್ಯತೆಯಾಗಿ ಬಿಸಿಲಿನ ನಿಯಂತ್ರಣ ಪರಿಕರಗಳನ್ನು ಕೊಡಲಾಗುತ್ತಿದೆ. ಒಂದು ವೇಳೆ ಸಿಬ್ಬಂದಿಗಳಿಂದ ಈ ಪ್ರಯತ್ನಕ್ಕೆ ಉತ್ತಮ ಪ್ರತಿಕ್ರಿಯೆ ಬಂದರೆ ಮುಂದಿನ ದಿನಗಳಲ್ಲಿ ಎಲ್ಲರಿಗೂ ವಿಸ್ತರಿಸಲಾಗುತ್ತದೆ ಎಂದ ಅವರು, ಈಗಾಗಲೇ ಟ್ರಾಫಿಕ್ ಪೊಲೀಸರಿಗೆ ಬಿಸಿಲಿನ ವೇಳೆಯಲ್ಲಿ ನೀರು, ಮಜ್ಜಿಗೆ ಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಎ.ಸಿ ಹೆಲ್ಮೆಟ್ ಚಾರ್ಜರ್ ಗೆ ಒಂದು ಬಾರಿ ಚಾರ್ಜ್ ಮಾಡಿದರೆ, ಗರಿಷ್ಠ 8 ಗಂಟೆಗಳ ಬ್ಯಾಟರಿಯ ಸಾಮರ್ಥ್ಯ ಹೊಂದಿದೆ, ಇದು ಬೆಳಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಕಾರ್ಯ ನಿರ್ವಹಿಸುತ್ತದೆ ಎಂದರು.

ಇದೇ ವೇಳೆಯಲ್ಲಿ ಪೊಲೀಸ್ ಕಮಿಷನರ್ ಅವರು, ಸಂಚಾರ ಪೊಲೀಸ್ ಠಾಣೆ – 1 ಮತ್ತು ಸಂಚಾರ ಪೊಲೀಸ್ ಠಾಣೆ – 2ರ ಪೊಲೀಸ್ ಅಧಿಕಾರಿಗಳಿಗೆ ಸಾಂಕೇತಿಕವಾಗಿ ಎ.ಸಿ ಹೆಲ್ಮೆಟ್ ಸೇರಿದಂತೆ ಇತರೆ ಕಿಟ್ ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಡಿಸಿಪಿಗಳಾದ ಕನಿಕಾ ಸಿಕ್ರಿವಾಲ್, ಪ್ರವೀಣ್ ನಾಯಕ್, ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿಯವರು ಹಾಜರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...