ಕಲಬುರಗಿ| ಟ್ರಾಫಿಕ್ ಪೊಲೀಸರಿಗೆ ಹವಾ ನಿಯಂತ್ರಿತ ಹೆಲ್ಮೆಟ್ ವಿತರಣೆ

Date:

Share post:

ಕಲಬುರಗಿ: ಬಿಸಿಲಿನಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಯವರ ಹಿತ ರಕ್ಷಣೆ ದೃಷ್ಟಿಯಿಂದ ರಾಜ್ಯದಲ್ಲಿ ಪ್ರಥಮ ಬಾರಿಗೆ ಕಲಬುರಗಿ ನಗರ ಪೊಲೀಸ್ ವತಿಯಿಂದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯವರಿಗೆ ಹವಾ ನಿಯಂತ್ರಿತ(ಎ.ಸಿ)ಹೆಲ್ಮೆಟ್ ವಿತರಿಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಡಾ. ಶರಣಪ್ಪ ಎಸ್.ಡಿ ಹೇಳಿದರು.

ನಗರದ ಪೊಲೀಸ್ ಆಯುಕ್ತಾಲಯದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೊದಲ ಹಂತವಾಗಿ 10 ಹವಾ ನಿಯಂತ್ರಿತ ಹೆಲ್ಮೆಟ್, 10 ಪೊಲ್ಲ್ಯೂಷನ್ ಕಂಟ್ರೋಲ್ ಮಾಸ್ಕ್, 140 ಮಿಂಚುವ ಜಾಕೆಟ್, ರಾತ್ರಿ ಸಮಯದಲ್ಲಿ ಕರ್ತವ್ಯ ನಿರ್ವಹಿಸಲು 150 ಬ್ಯಾಟನ್ ಗಳನ್ನು ವಿತರಿಸಲಾಗಿದೆ ಎಂದರು.

ಕಲಬುರಗಿಯಲ್ಲಿ ತಾಪಮಾನ, ವಾಯು ಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆ ಟ್ರಾಫಿಕ್ ಸಿಬ್ಬಂದಿಯವರ ಆರೋಗ್ಯದ ಹಿತದೃಷ್ಟಿಯಿಂದ ಅವರಿಗೆ ಮೊದಲಾದ್ಯತೆಯಾಗಿ ಬಿಸಿಲಿನ ನಿಯಂತ್ರಣ ಪರಿಕರಗಳನ್ನು ಕೊಡಲಾಗುತ್ತಿದೆ. ಒಂದು ವೇಳೆ ಸಿಬ್ಬಂದಿಗಳಿಂದ ಈ ಪ್ರಯತ್ನಕ್ಕೆ ಉತ್ತಮ ಪ್ರತಿಕ್ರಿಯೆ ಬಂದರೆ ಮುಂದಿನ ದಿನಗಳಲ್ಲಿ ಎಲ್ಲರಿಗೂ ವಿಸ್ತರಿಸಲಾಗುತ್ತದೆ ಎಂದ ಅವರು, ಈಗಾಗಲೇ ಟ್ರಾಫಿಕ್ ಪೊಲೀಸರಿಗೆ ಬಿಸಿಲಿನ ವೇಳೆಯಲ್ಲಿ ನೀರು, ಮಜ್ಜಿಗೆ ಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಎ.ಸಿ ಹೆಲ್ಮೆಟ್ ಚಾರ್ಜರ್ ಗೆ ಒಂದು ಬಾರಿ ಚಾರ್ಜ್ ಮಾಡಿದರೆ, ಗರಿಷ್ಠ 8 ಗಂಟೆಗಳ ಬ್ಯಾಟರಿಯ ಸಾಮರ್ಥ್ಯ ಹೊಂದಿದೆ, ಇದು ಬೆಳಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಕಾರ್ಯ ನಿರ್ವಹಿಸುತ್ತದೆ ಎಂದರು.

ಇದೇ ವೇಳೆಯಲ್ಲಿ ಪೊಲೀಸ್ ಕಮಿಷನರ್ ಅವರು, ಸಂಚಾರ ಪೊಲೀಸ್ ಠಾಣೆ – 1 ಮತ್ತು ಸಂಚಾರ ಪೊಲೀಸ್ ಠಾಣೆ – 2ರ ಪೊಲೀಸ್ ಅಧಿಕಾರಿಗಳಿಗೆ ಸಾಂಕೇತಿಕವಾಗಿ ಎ.ಸಿ ಹೆಲ್ಮೆಟ್ ಸೇರಿದಂತೆ ಇತರೆ ಕಿಟ್ ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಡಿಸಿಪಿಗಳಾದ ಕನಿಕಾ ಸಿಕ್ರಿವಾಲ್, ಪ್ರವೀಣ್ ನಾಯಕ್, ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿಯವರು ಹಾಜರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...