ಕಲಬುರಗಿ: ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ ಕುಡಿಯಲು ಮನವಿ

Date:

Share post:

ಕಲಬುರಗಿ: ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲಮೂಲ ನದಿಯಾದ ಭೀಮಾ ನದಿಯಿಂದ ನಿಂತ ನೀರು ಕಲುಷಿತವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ನೀರನ್ನು ಶುದ್ಧೀಕರಿಸಿ, ಸೂಪರ್ ಕ್ಲೋರಿನೇಶನ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆ. ಆದಾಗ್ಯೂ ಸಹ ಮುನ್ನೆಚ್ಚರಿಕೆ ಕ್ರಮವಾಗಿ ಕಲಬುರಗಿ ನಗರದ ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೊಸಿ ಕುಡಿಯಬೇಕೆಂದು ಕಲಬುರಗಿ ಕೆಯುಡಬ್ಲ್ಯೂಎಸ್‍ಎಂಪಿ-ಕೆಯುಐಡಿಎಫ್‍ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ನಗರದ ಸಾರ್ವಜನಿಕರು ತಮ್ಮ ಮನೆಗಳಿಗೆ ತೆಗೆದುಕೊಂಡ ನಳದ ಜೋಡಣೆಗೆ ತೊಟ್ಟಿಯನ್ನು ಕಡ್ಡಾಯವಾಗಿ ಕೂಡಿಸಿಕೊಳ್ಳಬೇಕು ಮತ್ತು ನಳದ ತಗ್ಗುಗಳನ್ನು ಮುಚ್ಚಬೇಕು. ಏಕೆಂದರೆ ತಗ್ಗುಗಳಲ್ಲಿ ಕಲುಷಿತ ನೀರು ಸಂಗ್ರಹಣೆಯಾಗಿ ಅದೇ ನೀರು ಮತ್ತೇ ನಳದ ತೊಟ್ಟಿಯಲ್ಲಿ ಸೇರುವ ಮೂಲಕ ಮುಂದಿನ ಗ್ರಾಹಕರಿಗೆ ತಲುಪುತ್ತದೆ. ಇದರಿಂದ ಸಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುತ್ತದೆ. ಅದೇ ರೀತಿ ನೀರಿನ ತೊಟ್ಟಿ ಅಳವಡಿಸುವುದರಿಂದ ನೀರು ಪೋಲಾಗದಂತೆ ನೋಡಿಕೊಳ್ಳಬಹುದಾಗಿದೆ.

ನಗರದ ನೀರು ಸರಬರಾಜಿನ ಗ್ರಾಹಕರು ತಮ್ಮ ನೀರಿನ ಬಿಲ್ಲಿನಲ್ಲಿ ಹೆಸರು, ವಿಳಾಸ, ಮನೆ ನಂಬರು ಹಾಗೂ ಮೋಬೈಲ್ ಸಂಖ್ಯೆಗಳನ್ನು ನೊಂದಾಯಿಸಲು, ಬದಲಾಯಿಸಲು ಮತ್ತು ಗೃಹ, ಗೃಹತೇತರ, ವಾಣಿಜ್ಯ ನಳ ಸಂಪರ್ಕಗಳ ಬದಲಾವಣೆ ಮಾಡಿಕೊಳ್ಳಲು ಯೋಜನಾ ಅನುಷ್ಠಾನ ಘಟಕ, ಕುಸ್ಸೆಂಪ್-ಕೆಯುಐಡಿಎಫ್‍ಸಿ, “ಜಲಭವನ” ನೆಲ ಮಹಡಿ, ಜೈ ಭವಾನಿ ಕನ್ವೇಷನ್ ಹಾಲ್, ಎದುರುಗಡೆ, ರಾಜಪೂರ-ಕುಸನೂರ ರಸ್ತೆ, ಕಲಬುರಿಗೆ ಕಚೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ಭೇಟಿ ನೀಡಿ ಸರಿಪಡಿಸಿಕೊಳ್ಳಬಹುದಾಗಿದೆ.

 

ಆದ್ದರಿಂದ ಸಾರ್ವಜನಿಕರು ಕಲಬುರಗಿ ಮಹಾನಗರ ಪಾಲಿಕೆ, ಕೆಯುಐಡಿಎಫ್‍ಸಿ ಹಾಗೂ ಮೆ|| ಎಲ್ ಆಂಡ್ ಟಿ ಲಿಮಿಟೆಡ್ ಇವರೊಂದಿಗೆ ಸಹಕರಿಸಲು ಹಾಗೂ ನೀರಿನ ಸಮಸ್ಯೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಗ್ರಾಹಕರ ಸೇವಾ ದೂರವಾಣಿ ಸಂಖ್ಯೆ: +91 1800 425 8247 (ಛಿಛಿಛಿ) ಹಾಗೂ 084-722-37247 ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: ಮಿಣಜಗಿಯಲ್ಲಿ ಹೊಸ ಕಟ್ಟಡಗಳ ಲೋಕಾರ್ಪಣೆ

ಕಲಬುರಗಿ ತಾಲೂಕಿನ ಮಿಣಜಗಿ ಗ್ರಾಮದಲ್ಲಿ 2023–24ನೇ ಸಾಲಿನ ವಿವಿಧ ಅಭಿವೃದ್ಧಿ ಯೋಜನೆಗಳ...

ಕಲಬುರಗಿ| ಫೆ.12 ರಿಂದ ಡಿ.ಇ.ಸಿ. ಸಾಮೂಹಿಕ ಗುಳಿಗೆ ನುಂಗಿಸುವ ಕಾರ್ಯಕ್ರಮ: ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ

ಕಲಬುರಗಿ: ಆನೆಕಾಲು ರೋಗ ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಇದೇ ಫೆಬ್ರವರಿ 12...

ಕಲಬುರಗಿ| ಚಾಂದ ಬೀಬೀ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಕಲಬುರಗಿ: ಚಾಂದ ಬೀ ಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೆಯ ಗಣರಾಜ್ಯೋತ್ಸವ...

ಕಲಬುರಗಿ| ಹಾಸ್ಟೆಲ್ ಸಿಬ್ಬಂದಿಗಳಿಗೆ ಐದು ತಿಂಗಳಿಂದ ಸಿಗದ ವೇತನ; ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20...