ಹಿರಿಯ ವಿಜ್ಞಾನಿ ಎಂ.ಆರ್. ಶ್ರೀನಿವಾಸನ್ ನಿಧನ

Date:

Share post:

ಬೆಂಗಳೂರು: ಹಿರಿಯ ಪರಮಾಣು ವಿಜ್ಞಾನಿ ಮತ್ತು ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್. ಶ್ರೀನಿವಾಸನ್ ಅವರು ನಿಧನರಾಗಿದರು.

 95 ವರ್ಷ ವಯಸ್ಸಾಗಿರುವ ಅವರು ತಮಿಳುನಾಡಿನ ಊಟಿಯಲ್ಲಿ ಅಸುನೀಗಿದ್ದಾರೆ.

ಶ್ರೀನಿವಾಸನ್‌ ಅವರು ಭಾರತದ ಪರಮಾಣು ಯೋಜನೆಗಳ ಪಿತಾಮಹ ಡಾ. ಹೋಮಿ ಜಹಾಂಗೀ‌ರ್ ಭಾಭಾ ಅವರೊಂದಿಗೆ ಕೆಲಸ ಮಾಡಿದ್ದರು. ಪ್ರತಿಷ್ಠಿತ ಪದ್ಮವಿಭೂಷಣ ಪ್ರಶಸ್ತಿಗೆ ಅವರು ಭಾಜನರಾಗಿದ್ದರು.

ಬೆಂಗಳೂರು ಮೂಲದ ಡಾ. ಮಾಲೂರು ರಾಮಸ್ವಾಮಿ ಶ್ರೀನಿವಾಸನ್‌ ಅವರು ಪರಮಾಣು ಶಕ್ತಿ ಆಯೋಗದ ಅಧ್ಯಕ್ಷರಾಗಿದ್ದರು. ಪರಮಾಣು ಶಕ್ತಿ ಇಲಾಖೆಯ ಕಾರ್ಯದರ್ಶಿ ಮತ್ತು ನ್ಯೂಕ್ಲಿಯರ್ ಪವ‌ರ್ ಕಾರ್ಪೊರೇಷನ್‌ ಆಫ್ ಇಂಡಿಯಾ ಲಿಮಿಟೆಡ್ ನ ಸ್ಥಾಪಕ-ಅಧ್ಯಕ್ಷರಾಗಿದ್ದರು.

ಶ್ರೀನಿವಾಸನ್‌ ಅವರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...