ಕಲಬುರಗಿ| ಯಲ್ಲಮ್ಮ ದೇವಸ್ಥಾನದಲ್ಲಿ ಕಳ್ಳತನ; ಸ್ಥಳಕ್ಕೆ ಪೊಲೀಸರು ಭೇಟಿ

Date:

Share post:

ಕಲಬುರಗಿ: ಚಿತ್ತಾಪುರ ಪಟ್ಟಣದ ಬಾಹರಪೇಟ್ ಸಮೀಪದ ಕೊತಲಾಪೂರ ಯಲ್ಲಮ್ಮ ದೇವಸ್ಥಾನದ ಬಾಗಿಲಿನ ಕೀಲಿ ಕೈ ಮುರಿದು ಒಳಗಡೆಯ ದೇವಿಯ ಬೆಳ್ಳಿ ಮೂರ್ತಿಯ ಎರಡು ಕೈಗಳನ್ನು ಕಟ್ ಮಾಡಿ, ಬೆಳ್ಳಿ ಕಳ್ಳತನ ಮಾಡಿರುವ ಘಟನೆ ನಡೆದಿದೆ.

ನವರಾತ್ರಿ ನಿಮಿತ್ತ ದೇವಸ್ಥಾನಕ್ಕೆ ಸುಣ್ಣ ಬಣ್ಣ ಮಾಡಿ ಅಲಂಕಾರ ಕಾರ್ಯ ನಡೆಯುತ್ತಿದೆ ಅದರಂತೆ ಮಂಗಳವಾರ ಕೊನೆ ಹಂತಕ್ಕೆ ತಲುಪಿತ್ತು. ಉಳಿದ ಕಾರ್ಯ ನಾಳೆ ಮಾಡಿದರಾಯಿತು ಎಂದು ದೇವಸ್ಥಾನದ ಗೇಟ್ ಮುಚ್ಚಿ ಕೀಲಿಕೈ ಹಾಕಿ ಹೋಗಲಾಗಿತ್ತು. ಎಂದಿನಂತೆ ಬುಧವಾರ ಬೆಳಗ್ಗೆ ದೇವಿಯ ಪೂಜೆ ಕಾರ್ಯಕ್ಕೆ ಅರ್ಚಕ ಮಂಜುನಾಥ ಆಗಮಿಸಿದಾಗ ದೇವಸ್ಥಾನ ಗೇಟ್ ಗೆ ಹಾಕಿದ ಕೀಲಿಕೈ ಮುರಿದು ಒಳಗಡೆ ಇರುವ ದೇವಿಯ ಬೆಳ್ಳಿ ಮೂರ್ತಿಯ ಎರಡು ಕೈಗಳನ್ನು ಕಟ್ ಮಾಡಿ ಕಳ್ಳತನ ಆಗಿರುವುದು ಕಂಡುಬಂದಿದೆ. ಅಲ್ಲದೇ ಬೆಳ್ಳಿಯ ಕಣ್ಣು ಬಿಟ್ಟು ಹಾಗೂ ಪಾದುಕೆ, ತಟ್ಟೆ ಸಹ ಕಳ್ಳತನವಾಗಿದ್ದು, ದೇವಿಯ ಮೂರ್ತಿಯನ್ನೇ ಕಳ್ಳತನ ಮಾಡುವ ಪ್ರಯತ್ನ ನಡೆದಿದೆ ಎಂದು ತಿಳಿದು ಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್‌ಐ ಶ್ರೀಶೈಲ್ ಅಂಬಾಟಿ, ರವಿಕುಮಾರ, ಬಸವರಾಜ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...