ಕಲಬುರಗಿ| ಯಲ್ಲಮ್ಮ ದೇವಸ್ಥಾನದಲ್ಲಿ ಕಳ್ಳತನ; ಸ್ಥಳಕ್ಕೆ ಪೊಲೀಸರು ಭೇಟಿ

Date:

Share post:

ಕಲಬುರಗಿ: ಚಿತ್ತಾಪುರ ಪಟ್ಟಣದ ಬಾಹರಪೇಟ್ ಸಮೀಪದ ಕೊತಲಾಪೂರ ಯಲ್ಲಮ್ಮ ದೇವಸ್ಥಾನದ ಬಾಗಿಲಿನ ಕೀಲಿ ಕೈ ಮುರಿದು ಒಳಗಡೆಯ ದೇವಿಯ ಬೆಳ್ಳಿ ಮೂರ್ತಿಯ ಎರಡು ಕೈಗಳನ್ನು ಕಟ್ ಮಾಡಿ, ಬೆಳ್ಳಿ ಕಳ್ಳತನ ಮಾಡಿರುವ ಘಟನೆ ನಡೆದಿದೆ.

ನವರಾತ್ರಿ ನಿಮಿತ್ತ ದೇವಸ್ಥಾನಕ್ಕೆ ಸುಣ್ಣ ಬಣ್ಣ ಮಾಡಿ ಅಲಂಕಾರ ಕಾರ್ಯ ನಡೆಯುತ್ತಿದೆ ಅದರಂತೆ ಮಂಗಳವಾರ ಕೊನೆ ಹಂತಕ್ಕೆ ತಲುಪಿತ್ತು. ಉಳಿದ ಕಾರ್ಯ ನಾಳೆ ಮಾಡಿದರಾಯಿತು ಎಂದು ದೇವಸ್ಥಾನದ ಗೇಟ್ ಮುಚ್ಚಿ ಕೀಲಿಕೈ ಹಾಕಿ ಹೋಗಲಾಗಿತ್ತು. ಎಂದಿನಂತೆ ಬುಧವಾರ ಬೆಳಗ್ಗೆ ದೇವಿಯ ಪೂಜೆ ಕಾರ್ಯಕ್ಕೆ ಅರ್ಚಕ ಮಂಜುನಾಥ ಆಗಮಿಸಿದಾಗ ದೇವಸ್ಥಾನ ಗೇಟ್ ಗೆ ಹಾಕಿದ ಕೀಲಿಕೈ ಮುರಿದು ಒಳಗಡೆ ಇರುವ ದೇವಿಯ ಬೆಳ್ಳಿ ಮೂರ್ತಿಯ ಎರಡು ಕೈಗಳನ್ನು ಕಟ್ ಮಾಡಿ ಕಳ್ಳತನ ಆಗಿರುವುದು ಕಂಡುಬಂದಿದೆ. ಅಲ್ಲದೇ ಬೆಳ್ಳಿಯ ಕಣ್ಣು ಬಿಟ್ಟು ಹಾಗೂ ಪಾದುಕೆ, ತಟ್ಟೆ ಸಹ ಕಳ್ಳತನವಾಗಿದ್ದು, ದೇವಿಯ ಮೂರ್ತಿಯನ್ನೇ ಕಳ್ಳತನ ಮಾಡುವ ಪ್ರಯತ್ನ ನಡೆದಿದೆ ಎಂದು ತಿಳಿದು ಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್‌ಐ ಶ್ರೀಶೈಲ್ ಅಂಬಾಟಿ, ರವಿಕುಮಾರ, ಬಸವರಾಜ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...