ಕಲಬುರಗಿ| ಅಧಿಕಾರಿಗಳಿಗೆ ಮಸಿ ಬಳಿದ ಕರವೇ ಕಾರ್ಯಕರ್ತರು: 11 ಮಂದಿ ಅರೆಸ್ಟ್

Date:

Share post:

ಕಲಬುರಗಿ: ನಗರದ ಕಣ್ಣಿ ಮಾರುಕಟ್ಟೆ ವಾಣಿಜ್ಯ ಮಳಿಗೆಯ ಕನ್ನಡ ಫಲಕ ತೆಗೆಯುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಲೋಕೋಪಯೋಗಿ ಎಂಜಿನಿಯರ್ ಅಮೀನ್ ಮುಕ್ತಾರ್ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಗಂಗಾಧರ ಎಸ್.ಮಾಳಗಿ ಮೇಲೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕಪ್ಪು ಮಸಿ ಬಳಿದಿರುವ ಪ್ರಕರಣಕ್ಕೆ ಸಂಬoಧಿಸಿದoತೆ ನಗರದ ಸ್ಟೇಷನ್ ಬಜಾರ್ ಠಾಣೆಯಲ್ಲಿ 20 ಕ್ಕೂ ಹೆಚ್ಚು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಕಣ್ಣಿ ಮಾರುಕಟ್ಟೆ ಮಳಿಗೆಗೆ ಅಳವಡಿಸಿರುವ ಕನ್ನಡ ನಾಮಫಲಕ ತೆರವುಗೊಳಿಸುತ್ತಿರುವುದನ್ನು ಗಮನಿಸಿದ ಕರವೇ ಕಾರ್ಯಕರ್ತರು ದಿಢೀರನೇ ಕುಡಾ ಕಚೇರಿಗೆ ಆಗಮಿಸಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ.ಎಸ್.ಮಾಳಗಿ ಮತ್ತು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಅಮೀನ್ ಮುಕ್ತಾರ್ ಅವರಿಗೆ ಕಪ್ಪು ಮಸಿ ಬಳಿದು ಆಕ್ರೋಶ ಹೊರ ಹಾಕಿದರು.

ಈ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಆಗಮಿಸಿದ ಸ್ಟೇಷನ್ ಬಜಾರ ಠಾಣೆಯ ಪೊಲೀಸರು ಈ ಪ್ರಕರಣಕ್ಕೆ ಸಂಬoಧಿಸಿದoತೆ ಸಂಘಟನೆಯ ಪ್ರಮುಖರಾದ ಆನಂದ ದೊಡ್ಡಮನಿ (32), ರವೀಂದ್ರ ಸರಡಗಿ (30), ರಾಜು ಮಠಪತಿ (25), ಪೃಥ್ವಿ (18), ಸಚಿನ ಲೋಕನಿ (25), ಶಾಹಿಲ ಚವ್ಹಾಣ್ (24), ಅಪ್ಪಾರಾವ ಕೆಟರಿ (38), ವಿಲಾಸ ರಾಠೋಡ (30), ಚೆನ್ನವೀರ ಬಿರಾದಾರ (24), ಪ್ರವೀಣ ಕಟ್ಟಿಮನಿ (35) ಮತ್ತು ಮೈತಾಬ್ (53) ಅವರನ್ನು ಬಂಧಿಸಿ, ಅವರ ವಿರುದ್ಧ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...