ಕಲಬುರಗಿ| ಗೋಡೆ ಕುಸಿದು ಬಾಲಕಿ ಸಾವು: ನಾಲ್ವರು ಮಕ್ಕಳಿಗೆ ಗಂಭೀರ ಗಾಯ

Date:

Share post:

ಕಲಬುರಗಿ: ಧಾರಾಕಾರ ಮಳೆ ಸುರಿದ ಪರಿಣಾಮ ಗೋಡೆ ಕುಸಿದು ಬಾಲಕಿಯೊಬ್ಬಳು ಮೃತಪಟ್ಟಿದ್ದು, ನಾಲ್ವರು ಮಕ್ಕಳಿಗೆ ಗಂಭೀರ ಗಾಯಗೊಂಡಿರುವ ಘಟನೆ ಯಡ್ರಾಮಿ ಪಟ್ಟಣದಲ್ಲಿ ತಡರಾತ್ರಿ 2.30ರ ವೇಳೆಗೆ ನಡೆದಿದೆ.

ಯಡ್ರಾಮಿ ಪಟ್ಟಣದ ಸಾನಿಯಾ ಸೈಪನಸಾಬ್ ತಾಂಬೋಳಿ (16) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟ ಬಾಲಕಿಯ ಸಹೋದರಿ, ಸಹೋದರರಾದ ಮಹಿಬೂಬ್ ತಾಂಬೋಳಿ, ನಿಶಾದ್ ತಾಂಬೋಳಿ, ಆಯಿಷಾ ತಾಂಬೋಳಿ ಹಾಗೂ ರಮಜಾನಬಿ ತಾಂಬೋಳಿ ಕಟ್ಟಡದ ಅವಶೇಷಗಳಲ್ಲಿ ಸಿಲುಕಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

 

ಭಾರೀ ಮಳೆಯಿಂದಾಗಿ ರಾತ್ರಿ ಗೋಡೆ ಕುಸಿದಿದ್ದು, ಅದರಲ್ಲಿ ಐವರು ಮಕ್ಕಳು ಸಿಲುಕಿದ್ದರು. ಅದಾಗಲೇ ನಾಲ್ವರನ್ನು ಎಳೆದು ಹೊರ ತೆಗೆದ ಬಳಿಕ ಇನ್ನೋರ್ವ ಬಾಲಕಿ ಸಾನಿಯಾಳನ್ನು ಹೊರ ತೆಗೆಯಲು ತಡವಾಯಿತು. ಗಂಭೀರ ಗಾಯಗೊಂಡಿದ್ದ ಸಾನಿಯಾಳನ್ನು ಕೂಡಲೇ ಯಡ್ರಾಮಿ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಯಾವುದೇ ವೈದ್ಯರಿಲ್ಲದೆ ಕಾರಣ ಆಕೆ ಮೃತಪಟ್ಟಿದ್ದಾಳೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

 

ಮೃತ ಬಾಲಕಿ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹ:

ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಕೊಡದೆ ಆಕೆ ಮೃತಪಟ್ಟಿದ್ದಾಳೆ. ಇದೊಂದು ತಾಲ್ಲೂಕು ಇದ್ದರೂ ಸಾರ್ವಜನಿಕರಿಗೆ ಉತ್ತಮ ಸೌಲಭ್ಯಗಳಿಲ್ಲ. ಬಡ ವರ್ಗದ ಕುಟುಂಬದ ಮಗಳು ಅನ್ಯಾಯವಾಗಿ ಸಾವಿಗೀಡಾಗಿದ್ದಾಳೆ. ಶಾಸಕರು, ಜಿಲ್ಲೆಯ ಹಾಗೂ ತಾಲ್ಲೂಕು ಅಧಿಕಾರಿಗಳು ಕೂಡಲೇ ನೀಡಿ, ಕುಟುಂಬಕ್ಕೆ ಸಾಂತ್ವನ ನೀಡಬೇಕು, ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ತಾಲ್ಲೂಕು ಆಸ್ಪತ್ರೆ ಎದುರು ಸ್ಥಳೀಯರು ಮೃತ ಬಾಲಕಿಯ ಶವ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಅಮೀರ್ ಪಟೇಲ್ ಚಿಂಚೋಳಿ, ಲಾಡ್ಲೆಸಾಬ್ ಮನಿಯಾರ್, ಶಬ್ಬೀ ಉಲ್ಲಾ ದಖನಿ, ವಾಹೀದ್ ಖುರೈಷಿ, ಇಸ್ಮಾಯಿಲ್ ಖುರೈಷಿ, ವಿಶ್ವನಾಥ್ ಪಾಟೀಲ್, ರಿಯಾಜ್ ಚೌಧರಿ, ಇಬ್ರಾಹಿಂ ಚೌಧರಿ, ಫತ್ರುದ್ದೀನ್ ತಾಂಬೋಲಿ, ರಹೀಮ್ ಪಾಶಾ ಹೊಸಮನಿ ಸೇರಿದಂತೆ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...