ಕಲಬುರಗಿ| ಕಟ್ಟಿಸಂಗಾವಿ ಬೃಹತ್ ಸೇತುವೆ ಮೇಲಿಂದ ಉಕ್ಕಿದ ನೀರು; ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್!

Date:

Share post:

ಕಲಬುರಗಿ: ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಹಾಗೂ ಬೋರಿ ನದಿಯಿಂದ 3.50 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಹರಿಬಿಟ್ಟದರಿಂದ ಭೀಮಾ ನದಿಯ ಪ್ರವಾಹದ ಅರ್ಭಟ ರಾತ್ರೋ ರಾತ್ರಿ ಹೆಚ್ಚಾಗಿದೆ. ಪರಿಣಾಮ ರಾಷ್ಟ್ರೀಯ ಹೆದ್ದಾರಿಗೆ ಸಮರ್ಕಿಸುವ ಜೇವರ್ಗಿ ತಾಲ್ಲೂಕಿನ ಕಟ್ಟಿಸಂಗಾವಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ.

ಶನಿವಾರ ರಾತ್ರಿ ಸೇತುವೆ ಸಮೀಪ ನೀರು ಹರಿಯುತ್ತಿತ್ತು, ಕ್ರಮೇಣ ಹೆಚ್ಚಿದ ಪ್ರವಾಹದಿಂದ ರವಿವಾರ ಬೆಳಗಿನ ಜಾವ ನೋಡಿದರೆ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಇದರಿಂದ ಬೀದರ್ – ಬೆಂಗಳೂರು, ಶ್ರೀ ರಂಗಪಟ್ಟಣಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.

ನೀರಿನ ರಭಸವನ್ನು ನೋಡಿಕೊಂಡು ಮುಂಜಾಗೃತಾ ಅಂಗವಾಗಿ ಈ ಕಟ್ಟಿಸಂಗಾವಿ ಬ್ರಿಡ್ಜ್ ಮೇಲೆ ಬೃಹತ್ ಗಾತ್ರದ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಇದೀಗ ಸೇತುವೆಯೇ ಮುಳುಗಿದ್ದರಿಂದ ತುರ್ತು ವಾಹನ ಆಂಬ್ಯುಲೆನ್ಸ್ ಸೇರಿದಂತೆ ಯಾವುದೇ ವಾಹನಗಳ ಓಡಾಟಕ್ಕೆ ಬ್ರೇಕ್ ಬಿದ್ದಿದೆ. ಹಾಗಾಗಿ ಈ ಮಾರ್ಗದಲ್ಲಿ ತೆರಳುವ ದೂರದ ಪ್ರಯಾಣಿಕರಿಗೆ ತುಂಬ ಕಷ್ಟ ಎದುರಾಗಿದೆ.

ರಸ್ತೆ ಪಕ್ಕದಲ್ಲೇ ನಿಂತ ವಾಹನಗಳು:

ಸೇತುವೆ ಮುಳುಗುವ ಹಂತದಲ್ಲೇ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿದ್ದರಿಂದ ಕಲಬುರಗಿಯಿಂದ ಜೇವರ್ಗಿ ಹಾಗೂ ಜೇವರ್ಗಿಯಿಂದ ಕಲಬುರ್ಗಿಗೆ ತೆರಳುವ ವಾಹನಗಳು ಸಾಲು ಸಾಲಾಗಿ ನಿಂತಿವೆ. ಟ್ರಕ್, ಕ್ಯಾಂಟರ್, ಬಸ್, ಕಾರು, ಗೂಡ್ಸ್ ವಾಹನಗಳು ಸೇರಿದಂತೆ ಹಲವು ವಾಹನಗಳು ನಿಂತ ಜಾಗದಲ್ಲೇ ನಿಂತಿವೆ. ಇದರಿಂದ ವಾಹನ ಚಾಲಕರಿಗೆ ಊಟ, ನೀರು ಮತ್ತಿತರ ಸೌಲಭ್ಯಗಳಿಂದ ಬಳಲುತ್ತಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...