ಕಲಬುರಗಿ| ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಸಿದ್ದರಾಮಯ್ಯ 

Date:

Share post:

ಕಲಬುರಗಿ: ಭಾರೀ ಮಳೆ ಹಾಗೂ ಮಹಾರಾಷ್ಟ್ರದ ವಿವಿಧ ನದಿ, ಜಲಾಶಯಗಳಿಂದ 3.50 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ಕಲಬುರಗಿ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಭೀಮಾ ನದಿಯ ಪ್ರವಾಹದಿಂದ ಉಂಟಾಗಿರುವ ಹಾನಿಯನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿ, ವೀಕ್ಷಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಕಲಬುರಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ‌ ನಿಲ್ದಾಣದಲ್ಲೇ ಪ್ರಾದೇಶಿಕ ಆಯುಕ್ತೆ, ಜಿಲ್ಲಾಧಿಕಾರಿ ಸೇರಿ ಉನ್ನತಮಟ್ಟದ ಅಧಿಕಾರಿಗಳ ಜೊತೆಗೆ ಪ್ರಾಥಮಿಕ ಸಭೆ ನಡೆಸಿ ಮಾಹಿತಿ ಪಡೆದರು.

ಬಳಿಕ ಮೊದಲ ಹಂತದಲ್ಲಿ ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಹಾನಿಗೀಡಾಗಿರುವ ಪ್ರದೇಶಗಳ ವೀಕ್ಷಣೆ ಮಾಡಿದರೆ, ಎರಡನೇ ಹಂತದಲ್ಲಿ ಬೀದರ್ ಹಾಗೂ ಯಾದಗಿರಿ ಜಿಲ್ಲೆಯ ನಷ್ಟವನ್ನು ಅವಲೋಕಿಸಿದರು.

ವೈಮಾನಿಕ ಸಮೀಕ್ಷೆಯ ವೇಳೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ರಹೀಮ್ ಖಾನ್ ಅವರೊಂದಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಕೂಡ ಸಿಎಂ ಸಿದ್ದರಾಮಯ್ಯರಿಗೆ ಸಾಥ್ ನೀಡಿದರು.

 

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...