ಕಲಬುರಗಿ: ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನೀಡುವುದರ ಕುರಿತು ಸರ್ಕಾರ ತನ್ನ ಅಂತಿಮ ನಿರ್ಧಾರವನ್ನು ತಿಳಿಸಬೇಕು ಎಂದು ಸೂಚಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ನ.13ಕ್ಕೆ ಮುಂದೂಡಿದೆ ಆದೇಶಿಸಿದೆ.
ನ್ಯಾ.ಎಂ.ಜಿ.ಎಸ್ ಕಮಲ್ ಅವರಿದ್ದ ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠವು, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ಮನವಿ ಮೇರೆಗೆ ಸರ್ಕಾರದ ನಿಲುವು ತಿಳಿಸಬೇಕು, ಎಲ್ಲವೂ ಸರಿಯಾಗಿದ್ದರೆ, ಮುಕ್ತಾಯವು ಸರಿಯಾಗಿಯೇ ಇರುತ್ತದೆ ಎಂದು ತಿಳಿಸಿ, ನ.13ರಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಬೆಂಗಳೂರಿನ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿ ಶಾಂತಿಯುತವಾಗಿ ಶಾಂತಿ ಸಭೆ ನಡೆಸಲಾಗಿದೆ. ಅದಕ್ಕಾಗಿ ನಾವು ನಮ್ಮ ಶುಭಾಯಗಳನ್ನು ತಿಳಿಸುತ್ತೇವೆ. ಅಧಿಕಾರಿಗಳು ಸಹ ಎಲ್ಲಾ ರೀತಿಯಲ್ಲೂ ಉತ್ತಮ ಸಹಕಾರ ನೀಡಿದ್ದಾರೆ ಎಂದು ಆರೆಸ್ಸೆಸ್ ಪರ ವಕೀಲ ಅರುಣ್ ಶ್ಯಾಮ್ ತಿಳಿಸಿದರು.
ಈ ಪ್ರಕರಣವನ್ನು ಶಾಂತಿಯುತವಾಗಿ ಪರಿಹರಿಸಲು ನ್ಯಾಯಾಲಯ ನಿರ್ದೇಶನ ನೀಡಿರುವುದು ಶ್ಲಾಘನೀಯ, ಒಂದೇ ದಿನ ಕಾರ್ಯಕ್ರಮ ನಡೆಸುವುದಾಗಿ 11 ಅರ್ಜಿಗಳು ಬಂದಿವೆ, ಎಲ್ಲರ ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಎಲ್ಲರಿಗೂ ಅನುಮತಿ ನೀಡಲಾಗುತ್ತದೆ, ಸರ್ಕಾರದ ನಿಲುವಿಗೆ ಕಾಲಾವಕಾಶ ಕೋರಿದರು.


