ಕಲಬುರಗಿ| ಚಿತ್ತಾಪುರನಲ್ಲಿ ಆರೆಸ್ಸೆಸ್ ಪಥ ಸಂಚಲನ; ಸರ್ಕಾರದ ನಿಲುವು ತಿಳಿಸುವಂತೆ ಸೂಚಿಸಿ ನ.13ಕ್ಕೆ ವಿಚಾರಣೆ ಮುಂದೂಡಿಕೆ

Date:

Share post:

ಕಲಬುರಗಿ: ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನೀಡುವುದರ ಕುರಿತು ಸರ್ಕಾರ ತನ್ನ ಅಂತಿಮ ನಿರ್ಧಾರವನ್ನು ತಿಳಿಸಬೇಕು ಎಂದು ಸೂಚಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ನ.13ಕ್ಕೆ ಮುಂದೂಡಿದೆ ಆದೇಶಿಸಿದೆ.

ನ್ಯಾ.ಎಂ.ಜಿ.ಎಸ್ ಕಮಲ್ ಅವರಿದ್ದ ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠವು, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ಮನವಿ ಮೇರೆಗೆ ಸರ್ಕಾರದ ನಿಲುವು ತಿಳಿಸಬೇಕು, ಎಲ್ಲವೂ ಸರಿಯಾಗಿದ್ದರೆ, ಮುಕ್ತಾಯವು ಸರಿಯಾಗಿಯೇ ಇರುತ್ತದೆ ಎಂದು ತಿಳಿಸಿ, ನ.13ರಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಬೆಂಗಳೂರಿನ ಅಡ್ವೊಕೇಟ್‌ ಜನರಲ್‌ ಕಚೇರಿಯಲ್ಲಿ ಶಾಂತಿಯುತವಾಗಿ ಶಾಂತಿ ಸಭೆ ನಡೆಸಲಾಗಿದೆ. ಅದಕ್ಕಾಗಿ ನಾವು ನಮ್ಮ ಶುಭಾಯಗಳನ್ನು ತಿಳಿಸುತ್ತೇವೆ. ಅಧಿಕಾರಿಗಳು ಸಹ ಎಲ್ಲಾ ರೀತಿಯಲ್ಲೂ ಉತ್ತಮ ಸಹಕಾರ ನೀಡಿದ್ದಾರೆ ಎಂದು ಆರೆಸ್ಸೆಸ್ ಪರ ವಕೀಲ ಅರುಣ್ ಶ್ಯಾಮ್ ತಿಳಿಸಿದರು.

ಈ ಪ್ರಕರಣವನ್ನು ಶಾಂತಿಯುತವಾಗಿ ಪರಿಹರಿಸಲು ನ್ಯಾಯಾಲಯ ನಿರ್ದೇಶನ ನೀಡಿರುವುದು ಶ್ಲಾಘನೀಯ, ಒಂದೇ ದಿನ ಕಾರ್ಯಕ್ರಮ ನಡೆಸುವುದಾಗಿ 11 ಅರ್ಜಿಗಳು ಬಂದಿವೆ, ಎಲ್ಲರ ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಎಲ್ಲರಿಗೂ ಅನುಮತಿ ನೀಡಲಾಗುತ್ತದೆ, ಸರ್ಕಾರದ ನಿಲುವಿಗೆ ಕಾಲಾವಕಾಶ ಕೋರಿದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...