ಕಲಬುರಗಿ| ಭೀಕರ ರಸ್ತೆ ಅಪಘಾತ; ಸ್ಥಳದಲ್ಲೆ ನಾಲ್ವರು ಸಾವು!

Date:

Share post:

ಕಲಬುರಗಿ: ಬೈಕ್ ಮತ್ತು ಕಾರಿಗೆ ಟ್ಯಾಂಕರ್ ವೊಂದು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೆ ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಅವರಾದ್(ಬಿ) ಗ್ರಾಮದ ಸಮೀಪ ಶುಕ್ರವಾರ ರಾತ್ರಿ ನಡೆದಿದೆ.

ಕಮಲಾಪುರ ತಾಲ್ಲೂಕಿನ ಶಿರಡೋಣ ಗ್ರಾಮದ ನಾಗೇಂದ್ರಪ್ಪ (33), ಶಿವರಾಜ್(32), ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಂದ್ರಕಲಾ(70) ಹಾಗೂ ದತ್ತಾತ್ರೇಯ(48) ಮೃತ ದುರ್ದೈವಿಗಳೆಂದು ತಿಳಿದುಬಂದಿದ್ದು, ಅದರಲ್ಲಿ ಉತ್ತಮ(36) ಹಾಗೂ ಮಹಿಳೆ ಸುದೇಶ್ನಾ ಎಂಬುವವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಮನಾಬಾದ್ ಕಡೆಗೆ ಹೋಗುತ್ತಿದ್ದ ಬೈಕ್ ಹಾಗೂ ಕಾರಿಗೆ ಹುಮನಾಬಾದ್ ಕಡೆಯಿಂದ ಕಲಬುರಗಿಯತ್ತ ಹೋಗುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟರೆ, ಕಾರಿನಲ್ಲಿದ್ದ ಮತ್ತಿಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಭೀಕರ ರಸ್ತೆ ಅಪಘಾತದಿಂದ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿದೆ.

ಈ ಕುರಿತು ಕಲಬುರಗಿ ಸಂಚಾರಿ ಠಾಣೆ-2 ರಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...