ಕಲಬುರಗಿ: ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರ ವಲಯದ ಫರಹತಾಬಾದ್ ಸಮೀಪದ ಮಂಗಳವಾರ ನಡೆದಿದೆ.
ಜೇವರ್ಗಿ ತಾಲ್ಲೂಕಿನ ಕೋಳಕೂರ ಗ್ರಾಮದ ಭಾಗಣ್ಣ ಭೀಮರಾಯ ಆಡಿನ (31) ಹಾಗೂ ಹೈಯಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ, ಕಲ್ಲೂರು ಗ್ರಾಮದ ಶರಣಬಸಪ್ಪ ಓಗಪ್ಪ ಪೂಜಾರಿ(32) ಮೃತ ದುರ್ದೈವಿಗಳೆಂದು ತಿಳಿದುಬಂದಿದೆ.

ಮೃತ ದೇಹಗಳು ರಕ್ತಸಿಕ್ತ ಸ್ಥಿತಿಯಲ್ಲಿ ಬಿದ್ದಿವೆ. ಸ್ಥಳಕ್ಕೆ ಕಲಬುರಗಿ ಸಂಚಾರ ಠಾಣೆ-1ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


