ಕಲಬುರಗಿ| ಜಿಲ್ಲೆಗೆ 250.97 ಕೋಟಿ ರೂ. ಅತಿವೃಷ್ಠಿ ಹಾನಿಯ ಪರಿಹಾರ ಮಂಜೂರು: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ 

Date:

Share post:

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರೀ ಮಳೆ ಹಾಗೂ ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ರಾಜ್ಯ ಸರ್ಕಾರ ಎಸ್.ಡಿ.ಆರ್.ಎಫ್/ ಎನ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಜಿಲ್ಲೆಯ 3.26 ಲಕ್ಷ‌ ರೈತರಿಗೆ 250.97 ಕೋಟಿ ರೂ. ಪರಿಹಾರ ಮಂಜೂರಾತಿ ನೀಡಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಕಳೆದ ಆಗಸ್ಟ್ ಮತ್ತು ಸೆಪ್ಟೆಂಬರ್ ಮಾಹೆಯಲ್ಲಿ ಅಪಾರ‌ ಪ್ರಮಾಣದ‌ಲ್ಲಿ ಬಿದ್ದ ಮಳೆಯಿಂದ 3.24 ಲಕ್ಷ ಹೆಕ್ಟೇರ್ ಪ್ರದೇಶ ಕೃಷಿ,‌ ತೋಟಗಾರಿಕೆ ಪ್ರದೇಶ ಹಾನಿಯಾಗಿದ್ದಕ್ಕೆ ಪರಿಹಾರ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಇದೀಗ ಸರ್ಕಾರ ಪರಿಹಾರ ತಂತ್ರಂಶದಲ್ಲಿ ಅರ್ಹ ರೈತರ ಹಾಗೂ ಹಾನಿ ಪ್ರದೇಶದ ದತ್ತಾಂಶದನ್ವಯ ಮೊದಲನೆ ಹಂತದಲ್ಲಿ SDRF/NDRF ಮಾರ್ಗಸೂಚಿಯನ್ವಯ ಜಿಲ್ಲೆಯ 3,26,183 ಫಲಾನುಭವಿ ರೈತರಿಗೆ ಒಟ್ಟು 250.97 ಕೋಟಿ ರೂ. ಹಣ ಮಂಜೂರಾತಿ ನೀಡಲಾಗಿದ್ದು, ಇನ್ ಪುಟ್ ಸಬ್ಸಿಡಿ ನೇರವಾಗಿ ಆಧಾರ ಸಂಖ್ಯೆಗೆ ಜೋಡಣೆ ಹೊಂದಿರುವ ಸಂಬಂದಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಮುಂದಿನ 3-4 ದಿನಗಳಲ್ಲಿ ಪರಿಹಾರ ಹಣ ಜಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...