ಕಲಬುರಗಿ ಜಿಲ್ಲಾ ಪ್ರಥಮ ವಚನ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಲೇಖಕಿ ಡಾ. ನೀಲಾಂಬಿಕಾ ಪೊಲೀಸ್ ಪಾಟೀಲ ಆಯ್ಕೆ

Date:

Share post:

ಕಲಬುರಗಿ:ಸಮಾಜ ಸುಧಾರಣೆಗೆ 12ನೇ ಶತಮಾನದ ಬಸವಾದಿ ಶರಣರ ವಿಚಾರಗಳನ್ನು ಸಾಮಾನ್ಯರಿಗೆ ತಲುಪಸಿವುದರ ಜತೆಗೆ ಹೊಸತನ ಮೂಡಿಸುವ ಸದುದ್ದೇಶದಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇದೇ ಮೊದಲ ಬಾರಿಗೆ ನಗರದ ಕನ್ನಡ ಭವನದಲ್ಲಿ ಜ.19ರಂದು ಆಯೋಜಿಸಲು ಉದ್ದೇಶಿಸಲಾಗಿರುವ ಒಂದು ದಿನದ ಜಿಲ್ಲಾ ಪ್ರಥಮ ವಚನ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ನಿರ್ದೇಶಕರೂ ಆದ ಹಿರಿಯ ಶರಣ ಲೇಖಕಿ ಡಾ. ನೀಲಾಂಬಿಕಾ ಪೊಲೀಸ್ ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಪ್ರಸ್ತುತ ಸಂದರ್ಭದಲ್ಲಿ ಸಮಾಜ ಮತ್ತೇ ಮಲೀನಗೊಂಡಿದ್ದು, ಜಾತೀಯತೆ, ಮೂಢನಂಬಿಕೆಗಳು, ಅತ್ಯಚಾರದಂತಹ ಅನೇಕ ಘೋರ ಘಟನೆಗಳು ಜನರ ಮನಸ್ಸುಗಳನ್ನು ಮತ್ತೇ ಆಳಲು ಆರಂಭಿಸಿವೆ. ಮಲೀನಗೊಂಡ ಮನಸ್ಸುಗಳನ್ನು ತಿಳಿಗೊಳಿಸಿ ಅಂಧಕಾರ ಅಳಿಸಿ, ಮನುಷ್ಯತ್ವ ಉಳಿಸಬೇಕಿರುವುದು ಅನಿವಾರ್ಯ. ಸಮಾನತೆಯಿಂದ ಸಾಗಿ ಬಂದ ಅನುಭವ ಮಂಟಪದ ಕಾರ್ಯವೈಖರಿ ಇಂದಿನ ಯುವ ಪೀಳಿಗೆಗೆ ದಾರಿ ಮಾಡಿಕೊಡಬಲ್ಲದು ಎಂಬುದನ್ನು ಈ ಸಮ್ಮೇಳನದ ಮೂಲಕ ತೋರಿಸಲು ಆಶಯವನ್ನು ಹೊಂದಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದಲ್ಲಿ ಜರುಗಿದ ಪದಾಧಿಕಾರಿಗಳು, ವಿಶೇಷ ಆಹ್ವಾನಿತರ ಸಭೆಯಲ್ಲಿ ಗೋದುತಾಯಿ ಮಹಿಳಾ ಪದವಿ ಮಹಾವಿದ್ಯಾಲಯದ ವಿಶ್ರಾಂತ ಪ್ರಾಂಶುಪಾಲರೂ ಆದ ಹಿರಿಯ ಲೇಖಕಿ ಡಾ. ನೀಲಾಂಬಿಕಾ ಪೊಲೀಸ್ ಪಾಟೀಲ ಅವರ ಹೆಸರನ್ನು ಅಂತಿಮಗೊಳಿಸಲಾಯಿತು ಎಂದು ಜಿಲ್ಲಾ ಕಸಾಪ ಕಾರ್ಯದರ್ಶಿ ಶಿವರಾಜ ಎಸ್ ಅಂಡಗಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...