SSLC ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ನೀಡದ ಶಿಕ್ಷಕರು.. ವಿದ್ಯಾರ್ಥಿ ಮಾಡಿದ್ದೇನು?

Date:

Share post:

ಇಂದಿನಿಂದ ರಾಜ್ಯದಲ್ಲಿ SSLC ಪರೀಕ್ಷೆ ನಡೆಯುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಯಶಸ್ವಿಯಾಗಿ ಬರೆದಿದ್ದಾರೆ. ಇದರ ನಡುವೆಯೇ ಇಂದು SSLC ಪರೀಕ್ಷೆ ಬರೆಯಲು ಹಾಲ್ ಟಿಕೆಟ್‌ ನೀಡದ ಹಿನ್ನಲೆ ವಿದ್ಯಾರ್ಥಿಯೊಬ್ಬ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕುಳಿತು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ಹರನಗಿರಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಅಭಿಷೇಕ್‌ ಎಂಬ ವಿದ್ಯಾರ್ಥಿ ಅಲರ್ಜಿ ಮೊಡವೆಗೆ ತುತ್ತಾಗಿದ್ದರಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ಹಾಜರಾತಿಯ ಕೊರತೆಯಿಂದಾಗಿ ಶಿಕ್ಷಕರು ಪ್ರವೇಶ ಪತ್ರ ಕೊಡಲು ನಿರಾಕರಿಸಿದ್ದಾರೆ. ಇದರಿಂದ ಬೇಸತ್ತ ಬಾಲಕ ಮತ್ತು ಆತನ ಕುಟುಂಬಸ್ಥರು ಅಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕುಳಿತುಕೊಂಡು ಪ್ರತಿಭಟನೆ ನಡೆಸಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಯ ಪ್ರತಿಭಟನೆಗೆ ಸ್ಪಂದಿಸಿರುವ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಈ ವಿಷಯ ಅರಿತ ಸಾರ್ವಜನಿಕರು ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕಿತ್ತು ಎಂದು ಹೇಳುತ್ತಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕೋಮು ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ...

ಕಲಬುರಗಿ| ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ 

ಕಲಬುರಗಿ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ...

ಕಲಬುರಗಿ| ಆಕಾಶವಾಣಿ  “ಹಲೋ ಪೊಲೀಸ್ ಕಮಿಷನರ್” ನೇರ ಫೋನ್ ಇನ್ ಕಾರ್ಯಕ್ರಮ

ಕಲಬುರಗಿ: ಆಕಾಶವಾಣಿ ಕಲಬುರಗಿ ಕೇಂದ್ರವು ಮೇ 22(ಶುಕ್ರವಾರ) ರ ಬೆಳಗ್ಗೆ 11...