SSLC ಪರೀಕ್ಷೆಯಲ್ಲಿ ಅಕ್ರಮ.. ಇಬ್ಬರು ಮೇಲ್ವಿಚಾರಕರು ಅಮಾನತು 

Date:

Share post:

ಇಂದಿನಿಂದ ಎಸ್ಸೆಸೆಲ್ಸಿ ಪರೀಕ್ಷೆ ಶುರುವಾಗಿದ್ದು, ಮೊದಲ ದಿನವೇ ಲಕ್ಷಾಂತರ ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಈ ನಡುವೆ ಯಾದಗಿರಿಯಲ್ಲಿ ಹಲವೆಡೆ ನಕಲು ಮಾಡಿರುವ ಮಾಹಿತಿ ಎಲ್ಲೆಡೆ ಹರಿದಾಡಿದೆ.

ಅದರಂತೆಯೇ ಈ ಪರೀಕ್ಷೆಯ ಸಂದರ್ಭದಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಇದೇ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಅಲ್ಲಿನ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸುತ್ತಿದ್ದ ಸುರಪುರ ತಾಲೂಕಿನ ಏವೂರಿನ ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್ ಗೌಡ & ಸುರಪುರದ ಪರೀಕ್ಷಾ ಕೇಂದ್ರದಲ್ಲಿದ್ದ ಅಲ್ಲಿನ ಝಂಡದಕೇರ ಗ್ರಾಮದ ಶಿಕ್ಷಕ ಹನುಮಂತರಾಯ ಅವರನ್ನು ಅಮಾನತುಗೊಳಿಸಲಾಗಿದೆ.

ಎರಡು ಕಡೆಗಳಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಶಿಕ್ಷಕರು ಯಾವುದೇ ಕ್ರಮ ಕೈಗೊಂಡಿಲ್ಲ, ಈ ಕೃತ್ಯಕ್ಕೆ ಮೇಲ್ವಿಚಾರಕರು ನಿರ್ಲಕ್ಷ್ಯ ಮಾಡಿದ್ದಾರೆ. ಹಾಗಾಗಿ ಸಿಸಿ ಕ್ಯಾಮರಾ ದೃಶ್ಯ ಆಧರಿಸಿಕೊಂಡು ಅಲ್ಲಿನ ಜಿಲ್ಲಾ ಪಂಚಾಯ್ತಿಯ ಸಿಇಒ ಗರೀಮಾ ಪನ್ವಾರ್ ಅವರು ಇಬ್ಬರೂ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...