SSLC ಪರೀಕ್ಷೆಯಲ್ಲಿ ಅಕ್ರಮ.. ಇಬ್ಬರು ಮೇಲ್ವಿಚಾರಕರು ಅಮಾನತು 

Date:

Share post:

ಇಂದಿನಿಂದ ಎಸ್ಸೆಸೆಲ್ಸಿ ಪರೀಕ್ಷೆ ಶುರುವಾಗಿದ್ದು, ಮೊದಲ ದಿನವೇ ಲಕ್ಷಾಂತರ ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಈ ನಡುವೆ ಯಾದಗಿರಿಯಲ್ಲಿ ಹಲವೆಡೆ ನಕಲು ಮಾಡಿರುವ ಮಾಹಿತಿ ಎಲ್ಲೆಡೆ ಹರಿದಾಡಿದೆ.

ಅದರಂತೆಯೇ ಈ ಪರೀಕ್ಷೆಯ ಸಂದರ್ಭದಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಇದೇ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಅಲ್ಲಿನ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸುತ್ತಿದ್ದ ಸುರಪುರ ತಾಲೂಕಿನ ಏವೂರಿನ ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್ ಗೌಡ & ಸುರಪುರದ ಪರೀಕ್ಷಾ ಕೇಂದ್ರದಲ್ಲಿದ್ದ ಅಲ್ಲಿನ ಝಂಡದಕೇರ ಗ್ರಾಮದ ಶಿಕ್ಷಕ ಹನುಮಂತರಾಯ ಅವರನ್ನು ಅಮಾನತುಗೊಳಿಸಲಾಗಿದೆ.

ಎರಡು ಕಡೆಗಳಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಶಿಕ್ಷಕರು ಯಾವುದೇ ಕ್ರಮ ಕೈಗೊಂಡಿಲ್ಲ, ಈ ಕೃತ್ಯಕ್ಕೆ ಮೇಲ್ವಿಚಾರಕರು ನಿರ್ಲಕ್ಷ್ಯ ಮಾಡಿದ್ದಾರೆ. ಹಾಗಾಗಿ ಸಿಸಿ ಕ್ಯಾಮರಾ ದೃಶ್ಯ ಆಧರಿಸಿಕೊಂಡು ಅಲ್ಲಿನ ಜಿಲ್ಲಾ ಪಂಚಾಯ್ತಿಯ ಸಿಇಒ ಗರೀಮಾ ಪನ್ವಾರ್ ಅವರು ಇಬ್ಬರೂ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...