SSLC ಪರೀಕ್ಷೆಯಲ್ಲಿ ಅಕ್ರಮ.. ಇಬ್ಬರು ಮೇಲ್ವಿಚಾರಕರು ಅಮಾನತು 

Date:

Share post:

ಇಂದಿನಿಂದ ಎಸ್ಸೆಸೆಲ್ಸಿ ಪರೀಕ್ಷೆ ಶುರುವಾಗಿದ್ದು, ಮೊದಲ ದಿನವೇ ಲಕ್ಷಾಂತರ ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಈ ನಡುವೆ ಯಾದಗಿರಿಯಲ್ಲಿ ಹಲವೆಡೆ ನಕಲು ಮಾಡಿರುವ ಮಾಹಿತಿ ಎಲ್ಲೆಡೆ ಹರಿದಾಡಿದೆ.

ಅದರಂತೆಯೇ ಈ ಪರೀಕ್ಷೆಯ ಸಂದರ್ಭದಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಇದೇ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಅಲ್ಲಿನ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸುತ್ತಿದ್ದ ಸುರಪುರ ತಾಲೂಕಿನ ಏವೂರಿನ ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್ ಗೌಡ & ಸುರಪುರದ ಪರೀಕ್ಷಾ ಕೇಂದ್ರದಲ್ಲಿದ್ದ ಅಲ್ಲಿನ ಝಂಡದಕೇರ ಗ್ರಾಮದ ಶಿಕ್ಷಕ ಹನುಮಂತರಾಯ ಅವರನ್ನು ಅಮಾನತುಗೊಳಿಸಲಾಗಿದೆ.

ಎರಡು ಕಡೆಗಳಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಶಿಕ್ಷಕರು ಯಾವುದೇ ಕ್ರಮ ಕೈಗೊಂಡಿಲ್ಲ, ಈ ಕೃತ್ಯಕ್ಕೆ ಮೇಲ್ವಿಚಾರಕರು ನಿರ್ಲಕ್ಷ್ಯ ಮಾಡಿದ್ದಾರೆ. ಹಾಗಾಗಿ ಸಿಸಿ ಕ್ಯಾಮರಾ ದೃಶ್ಯ ಆಧರಿಸಿಕೊಂಡು ಅಲ್ಲಿನ ಜಿಲ್ಲಾ ಪಂಚಾಯ್ತಿಯ ಸಿಇಒ ಗರೀಮಾ ಪನ್ವಾರ್ ಅವರು ಇಬ್ಬರೂ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...