BREAKING: ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ!

Date:

Share post:

ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಇಂದು (ಏ.16) ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ತಮ್ಮ 81ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಹಲಬು ದಿನಗಳಿಂದ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದವು. ಇದೀಗ ಅವರ ನಿಧನದ ಬಗ್ಗೆ ಪುತ್ರ ಯೋಗೇಶ್ ಅವರೇ ಖಚಿತಪಡಿಸಿದ್ದಾರೆ.

ಅವರ ಸಾವಿನಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ದ್ವಾರಕೀಶ್ ಅವರು ಇನ್ನಿಲ್ಲ ಎಂಬ ಸುದ್ದಿ ಕೇಳಿ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.

‘ರಾತ್ರಿ ಲೂಸ್ ಮೋಷನ್ ಆಗಿತ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ಮಲಗಿದ್ದರು. ಮಲಗಿದವರು ಆಮೇಲೆ ಏಳಲೇ ಇಲ್ಲ. ಅವರಿಗೆ ಹೃದಯಾಘಾತವಾಗಿದೆ’ ಎಂದು ದ್ವಾರಕೀಶ್ ಅವರ ಪುತ್ರ ಯೋಗಿಶ್ ಮಾಹಿತಿ ನೀಡಿದ್ದಾರೆ.

ನಿರ್ಮಾಪಕನಾಗಿ, ನಿರ್ದೇಶಕನಾಗಿ ಅವರು ಕನ್ನಡ, ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ‘ಮಮತೆಯ ಬಂಧನ’ ಅವರ ನಿರ್ಮಾಣದ ಮೊದಲ ಸಿನಿಮಾವಾದರೆ, ‘ವೀರ ಸಂಕಲ್ಪ’ ಎಂಬ ಚಿತ್ರ ಅವರು ನಟಿಸಿದ ಮೊದಲ ಸಿನಿಮಾ ಆಗಿದೆ.

ದ್ವಾರಕೀಶ್ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ಸಿಎಂ, ಸಚಿವರು ಸಹ ಕಂಬನಿ ಮಿಡಿದಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...