BREAKING: ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ!

Date:

Share post:

ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಇಂದು (ಏ.16) ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ತಮ್ಮ 81ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಹಲಬು ದಿನಗಳಿಂದ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದವು. ಇದೀಗ ಅವರ ನಿಧನದ ಬಗ್ಗೆ ಪುತ್ರ ಯೋಗೇಶ್ ಅವರೇ ಖಚಿತಪಡಿಸಿದ್ದಾರೆ.

ಅವರ ಸಾವಿನಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ದ್ವಾರಕೀಶ್ ಅವರು ಇನ್ನಿಲ್ಲ ಎಂಬ ಸುದ್ದಿ ಕೇಳಿ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.

‘ರಾತ್ರಿ ಲೂಸ್ ಮೋಷನ್ ಆಗಿತ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ಮಲಗಿದ್ದರು. ಮಲಗಿದವರು ಆಮೇಲೆ ಏಳಲೇ ಇಲ್ಲ. ಅವರಿಗೆ ಹೃದಯಾಘಾತವಾಗಿದೆ’ ಎಂದು ದ್ವಾರಕೀಶ್ ಅವರ ಪುತ್ರ ಯೋಗಿಶ್ ಮಾಹಿತಿ ನೀಡಿದ್ದಾರೆ.

ನಿರ್ಮಾಪಕನಾಗಿ, ನಿರ್ದೇಶಕನಾಗಿ ಅವರು ಕನ್ನಡ, ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ‘ಮಮತೆಯ ಬಂಧನ’ ಅವರ ನಿರ್ಮಾಣದ ಮೊದಲ ಸಿನಿಮಾವಾದರೆ, ‘ವೀರ ಸಂಕಲ್ಪ’ ಎಂಬ ಚಿತ್ರ ಅವರು ನಟಿಸಿದ ಮೊದಲ ಸಿನಿಮಾ ಆಗಿದೆ.

ದ್ವಾರಕೀಶ್ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ಸಿಎಂ, ಸಚಿವರು ಸಹ ಕಂಬನಿ ಮಿಡಿದಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...