ಕಲಬುರಗಿ: ಆಸ್ತಿ ವಿಚಾರಕ್ಕಾಗಿ ಮಾರಕಾಸ್ತ್ರಗಳಿಂದ ಅತ್ತೆಯ ಕತ್ತು ಕೊಯ್ದು ಹತ್ಯೆ ಮಾಡಿದ ಅಳಿಯಂದಿಯರು

Date:

Share post:

ಕಲಬುರಗಿ: ಆಸ್ತಿ ವಿಚಾರಕ್ಕಾಗಿ ಸ್ವತಃ ಅಳಿಯಂದರೆ ಮಾರಕಾಸ್ತ್ರಗಳಿಂದ ತನ್ನ ಅತ್ತೆಯ ಕತ್ತನ್ನು (ಕುತ್ತಿಗೆ) ಕೊಯ್ದು ಕೊಲೆ ಮಾಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಬಂದರವಾಡ್ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ.

ಬಂದರವಾಡ್ ಗ್ರಾಮದ ನಿವಾಸಿ ಲಕ್ಕಮ್ಮ ತಂದೆ ಸೈಬಣ್ಣ ದೊಡ್ಡಮನಿ (40) ಎಂಬಾತರೆ ಕೊಲೆಯಾದ ದುರ್ದೈವಿ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆ ಕಟ್ಟುವ ವಿಚಾರದಲ್ಲಿ ಈ ಹಿಂದೆ ಕುಟುಂಬದಲ್ಲೇ ಜಗಳವಾಗಿತ್ತು. ಅದೇ ಹಳೆಯ ವೈಶಮ್ಯದಿಂದಾಗಿ ಈಗ ಮಹಿಳೆಯ ಕೊಲೆಯಾಗಿದೆ ಎಂದು ತಿಳಿದುಬಂದಿದೆ.

ಸದ್ಯ ಕೊಲೆ ಆರೋಪಿಗಳಾದ ಸಂತೋಷ್(35) ಮಂಜುನಾಥ್(25) ಇತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಕುರಿತಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಫಜಲಪುರ ವೃತ್ತ ನಿರೀಕ್ಷಕರು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಸೇರಿದಂತೆ ಮತ್ತಿತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...