ಕಲಬುರಗಿ| ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ಬಾಂಬ್ ಬೆದರಿಕೆ; ಆರೋಪಿ ಬಂಧನ

Date:

Share post:

ಕಲಬುರಗಿ: ದೆಹಲಿ-ಬೆಂಗಳೂರು ಮಾರ್ಗದಲ್ಲಿ ಓಡಾಡುವ ಕರ್ನಾಟಕ ಎಕ್ಸ್ ಪ್ರೆಸ್(ಕೆಕೆ ಎಕ್ಸ್ ಪ್ರೆಸ್‌) ರೈಲಿನಲ್ಲೇ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಅದೇ ರೈಲಿನಲ್ಲಿ ಬಾಂಬ್ ಇಡಲಾಗಿದೆ ಎಂದು ರೈಲ್ವೆ ಕಂಟ್ರೋಲ್ ರೂಮ್ ಗೆ ಬೆದರಿಕೆ ಕರೆ ಮಾಡಿರುವ ಘಟನೆ ನಡೆದ ಬೆನ್ನಲ್ಲೇ ಆರೋಪಿಯನ್ನು ಬಂಧಿಸುವಲ್ಲಿ ವಾಡಿ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಉತ್ತರ ಪ್ರದೇಶ ಮೂಲದ ದೀಪಸಿಂಗ್ ರಾಥೋಡ (33) ಎಂಬಾತನ್ನೇ ಬಂಧಿಸಿ, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವಾಡಿ ರೈಲ್ವೆ ಪೊಲೀಸ್‌ ಠಾಣೆಯ ಪಿಎಸ್‌ಐ ವೀರಭದ್ರಪ್ಪ ಎಚ್‌.ಎಸ್ ಅವರು ತಿಳಿಸಿದ್ದಾರೆ.

4 ಗಂಟೆ ಕೆಕೆ ಎಕ್ಸ್ ಪ್ರೆಸ್ ರೈಲು ತಪಾಸಣೆ:

ಕೆಕೆ ಎಕ್ಸ್ ಪ್ರೆಸ್ ರೈಲಿನಲ್ಲಿ ಬಾಂಬ್ ಇಟ್ಟಿರುವ ಅನುಮಾನವಿದೆ ಎಂದು ಪ್ರಯಾಣಿಕನೋರ್ವ ಕರೆ ಮಾಡಿ ಬೆದರಿಕೆ ಹಾಕಿದ್ದರಿಂದ ದೆಹಲಿ-ಬೆಂಗಳೂರು ಕರ್ನಾಟಕ ಎಕ್ಸ್ ಪ್ರೆಸ್ ರೈಲನ್ನು 4 ಗಂಟೆ ತಪಾಸಣೆಗೊಳಪಡಿಸಲಾದ ಘಟನೆ ರವಿವಾರ ಬೆಳಗಿನ ಜಾವ ವಾಡಿ ರೈಲು ನಿಲ್ದಾಣದಲ್ಲಿ ನಡೆದಿದೆ.

ಬೆದರಿಕೆ ಕರೆಯಿಂದ ಎಚ್ಚೆತ್ತ ರೈಲ್ವೆ ಪೊಲೀಸರು, ಕೆಕೆ ಎಕ್ಸ್ ಪ್ರೆಸ್‌ ರೈಲನ್ನು ವಾಡಿ ನಿಲ್ದಾಣದಲ್ಲಿ ತಡೆದು ತಪಾಸಣೆ ಮಾಡಿದ್ದಾರೆ. ಬಾಂಬ್ ನಿಷ್ಕ್ರಿಯ ದಳದ ಡಾಗ್ ಸಿಬ್ಬಂದಿಗಳು ಪ್ರಯಾಣಿಕರನ್ನು ಕೆಳಗಿಳಿಸಿ ರೈಲಿನ 22 ಬೋಗಿಗಳನ್ನು ತಪಾಸಣೆ ನಡೆಸಿದ್ದಾರೆ.

ಬಾಂಬ್ ಪತ್ತೆಯಾಗಿಲ್ಲ; ಸ್ಪಷ್ಟನೆ:

ಬಾಂಬ್ ಇಟ್ಟಿರುವ ಕುರಿತು ರೈಲ್ವೆ ಕಂಟ್ರೋಲ್ ರೂಮ್ ಗೆ ಕರೆ ಮಾಡಿರುವ ವ್ಯಕ್ತಿಯನ್ನು ವಿಚಾರಿಸಿದಾಗ ಸುಳ್ಳು ಮಾಹಿತಿ ನೀಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಬಾಂಬ್ ಬೆದರಿಕೆ ಇಟ್ಟಿದ್ದ ಪ್ರಯಾಣಿಕ ಗುಂತಕಲ್ ಕಡೆ ಪ್ರಯಾಣಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಈ ಕುರಿತು ವಾಡಿ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...