ತಿರುಪತಿ: ಲಾರಿಯೊಂದು ಟೆಂಪೋ ಟ್ರಾವೆಲರ್ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕದ ಮೂವರು ದಾರುಣ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅನ್ನಮಯ್ಯ ಜಿಲ್ಲೆಯ ಕುರಬಳಕೋಟ ಮಂಡಲದ ಚೆನ್ನಾಮರ್ರಿ ಮಿಟ್ಟ ಎಂಬಲ್ಲಿ ಸೋಮವಾರ ಈ ಅಪಘಾತ ಸಂಭವಿಸಿದೆ.
ಮೃತರನ್ನು ಬಾಗೇಪಲ್ಲಿ ನಿವಾಸಿಗಳಾದ ಮೇಘರಾಜ್(17), ಚರಣ್(17) ಮತ್ತು ಶ್ರಾವಣಿ(28) ಎಂದು ಗುರುತಿಸಲಾಗಿದೆ. ಲಾರಿ ಡಿಕ್ಕಿ ಹೊಡೆದಾಗ ಟೆಂಪೋ ಟ್ರಾವೆಲರ್ ಮದನಪಲ್ಲಿಯಿಂದ ಬಾಗೇಪಲ್ಲಿ ಕಡೆಗೆ ಹೋಗುತ್ತಿತ್ತು. ಢಿಕ್ಕಿಯ ತೀವ್ರತೆಗೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.
ಟೆಂಪೋದಲ್ಲಿದ್ದವರು ತಿರುಪತಿ ದರ್ಶನ ಮುಗಿಸಿ ತಮ್ಮ ತವರೂರಿಗೆ ಮರಳುತ್ತಿದ್ದರು.


