ಕಲಬುರಗಿಯಲ್ಲಿ ಯುವಕನಿಗೆ ಚಾಕು ಇರಿತ: ಪ್ರಕರಣ ದಾಖಲು!

Date:

Share post:

ಕಲಬುರಗಿ: ನನ್ನ ತಂಗಿಗೆ ಚುಡಾಯಿಸಬೇಡ, ಆಕೆಯ ತಂಟೆಗೆ ಬರಬೇಡ ಎಂದು ಬುದ್ಧಿವಾದ ಹೇಳಿದ ಅಣ್ಣನಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಇಲ್ಲಿನ ಫರಹತಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಪಾಣೆಗಾಂವ ಬಸವನ ತಾಂಡಾದಲ್ಲಿ ನಡೆದಿದೆ. ಅಮರನಾಥ ಚಿನ್ನಾರಾಠೋಡ್ ಎಂಬುವವರಿಗೆ ಪರಶುರಾಮ್ ನಾರಾಯಣ ರಾಠೋಡ್ ಎಂಬಾತನೆ ಚಾಕು ಇರಿದಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಅಮರನಾಥ ಸಹೋದರಿಯನ್ನು ಪರಶುರಾಮ ಆಗಾಗ ಚುಡಾಯಿಸುತ್ತಿದ್ದ. ಇದರಿಂದ ಸಹೋದರ ಅಮರನಾಥ ರಾಠೋಡ್ ಮತ್ತು ಶಿವಾಜಿ ರಾಠೋಡ್ ಅವರು ಪರಶುರಾಮಗೆ ನಮ್ಮ ತಂಗಿಯ ತಂಟೆಗೆ ಬರಬೇಡ ಎಂದು ಬುದ್ಧಿವಾದ ಹೇಳಿದ್ದರು. ಇದರಿಂದ ಕುಪಿತನಾದ ಪರಶುರಾಮನು, ರಾಘವೇಂದ್ರ, ಪ್ರವೀಣ್, ಪ್ರತಾಪ್, ಶೇಖರ್ ಮತ್ತು ರಾಕೇಶ್ ಜೊತೆಗೂಡಿ ಅಮರನಾಥ ಅವರೊಂದಿಗೆ ಜಗಳ ತೆಗೆದು ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಶಿವಾಜಿ ಚಿನ್ನಾರಾಠೋಡ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...