ಕಲಬುರಗಿ| ಯುವನಿಧಿ ಯೋಜನೆ; ಹಣ ವರ್ಗಾವಣೆ ಬಂದ್?

Date:

Share post:

ಕಲಬುರಗಿ: ಯುವನಿಧಿ ಯೋಜನೆಯ ಪ್ರಯೋಜನ ಪಡೆಯಲು ಇನ್ನು ಮುಂದೆ ಅಭ್ಯರ್ಥಿಗಳು “ಪ್ರತಿ ತಿಂಗಳಿಗೊಮ್ಮೆ” ತಾವು ನಿರುದ್ಯೋಗಿಯೆಂದು ಮತ್ತು ವ್ಯಾಸಂಗವನ್ನು ಮುಂದುವರೆಸುತ್ತಿಲ್ಲವೆoದು ಸ್ವಯಂ ಘೋಷಣೆಯನ್ನು ಮಾಡಬೇಕಿದೆ. ಸದರಿ ಅಭ್ಯರ್ಥಿಗಳು ಪ್ರತಿ ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಸೇವಾ ಸಿಂಧು https://sevasindhugs.karnataka.gov.in ವೆಬ್‌ಸೈಟ್‌ನಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು. ಉಳಿದಂತೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂಬುವುದನ್ನು ಪರಿಶೀಲಿಸಿಕೊಂಡು, ಒಂದು ವೇಳೆ ಅರ್ಜಿ ಅಪ್ರೂವ್ ಆಗದ ಸಂದರ್ಭದಲ್ಲಿ ಸೂಚಿಸಲ್ಪಟ್ಟ ಇಲಾಖೆಯ ಕಚೇರಿಗಳಿಗೆ ತಮ್ಮ ಎಲ್ಲಾ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೋಂದಿಗೆ ಖುದ್ದಾಗಿ ಭೇಟಿ ನೀಡಿ ಅವುಗಳ ಜೀರಾಕ್ಸ್ ಪ್ರತಿಗಳನ್ನು ಸಲ್ಲಿಸಿ ಅಪ್ರೂವ್ ಮಾಡಿಕೊಳ್ಳಬೇಕು.

ಯುವನಿಧಿ ಯೋಜನೆಯಡಿ ಪದವಿ ಮತ್ತು ಸ್ನಾತಕೋತರ ಪದವಿ ಹಾಗೂ ಡಿಪ್ಲೋಮಾಗಳನ್ನು 2022-23ನೇ, 2023-2024ನೇ ಹಾಗೂ 2024-2025ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ, 2023, 2024, 2025ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡು ಈ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬೇಕು. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ ೧೮೦ ದಿವಸಗಳ ಪೂರೈಸಿದ ನಂತರ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಕರೆ

ಕಲಬುರಗಿ: ವಿದ್ಯಾರ್ಥಿಗಳುಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ತಮ್ಮ ಪ್ರತಿಭೆಯನ್ನು...

ಕಲಬುರಗಿ| ನಮ್ಮ ಕರ್ನಾಟಕ ಸೇನೆಯ ಕಚೇರಿ ಉದ್ಘಾಟನೆ

ಕಲಬುರಗಿ: ನಗರದ ಐವಾನ್-ಏ-ಶಾಹಿನಲ್ಲಿರುವ ವಿಜ್ಜು ವುಮೇನ್ಸ್ ಕಾಲೇಜು ಹತ್ತಿರ ಜಾಜಿ ಕಾಂಪ್ಲೇಕ್ಸ್ನಲ್ಲಿ...

ಕಲಬುರಗಿ| ಗುಲಬರ್ಗಾ ವಿವಿಯಲ್ಲಿ ಶ್ರೀ ಕನಕದಾಸರ 538ನೇ ಜಯಂತ್ಯೋತ್ಸವ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ದಾಸ ಶ್ರೇಷ್ಠ ಶ್ರೀ...

ಕಲಬುರಗಿ| ಅಸ್ಪೃಶ್ಯತೆ ನಿವಾರಣೆಗೆ ಬಾಬಾಸಾಹೇಬರ ವಿಚಾರ ಪ್ರಸಾರ ಅಗತ್ಯ: ಎಚ್.ಟಿ. ಪೋತೆ

ಕಲಬುರಗಿ: “ದೇಶದಲ್ಲಿ ಇಂದಿಗೂ ಅಸ್ಪೃಶ್ಯತೆ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಕನಕದಾಸರನ್ನು ಹೋರಗೆ ಇಟ್ಟ...