ಡಾ.ಸಯ್ಯದ್ ಶಾಹ್ ಖುಸ್ರೋ ಸೂಫಿ ಪರಂಪರೆ, ಭಾವೈಕ್ಯತೆಗೆ ಕೊಡುಗೆ ಅಪಾರ: ಪ್ರಿಯಾಂಕ್ ಖರ್ಗೆ

Date:

Share post:

ಕಲಬುರಗಿ: ಹಜ್ರತ್ ಖ್ವಾಜಾ ಬಂದೇ ನವಾಜ್ ದರ್ಗಾದ ಗುರುಗಳು ಆದ ಡಾ. ಸಯ್ಯದ್ ಶಾಹ್ ಖುಸ್ರೋ ಹುಸೇನಿ ಅವರ ನಿಧನದ ಸುದ್ದಿಯು ನನ್ನಲ್ಲಿ ಅತ್ಯಂತ ನೋವುಂಟು ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಅವರು ಡಾ. ಸಯ್ಯದ್ ಶಾಹ್ ಖುಸ್ರೋ ಹುಸೇನಿ ಅವರ ಅಂತಿಮ ದರ್ಶನಕ್ಕಾಗಿ ನಗರದಲ್ಲಿ ಆಗಮಿಸಿದ ಬಳಿಕ ಅವರು ಮಾತನಾಡಿದರು. ಡಾ.ಸಯ್ಯದ್ ಶಾಹ್ ಖುಸ್ರೋ ಅವರು ನಾಡಿನ ಸೂಫಿ ಪರಂಪರೆಗೆ, ಭಾವೈಕ್ಯತೆಯ ಪರಂಪರೆಗೆ ಅವರು ನೀಡಿದ ಕೊಡುಗೆ ಅಪಾರವಾದದ್ದು. ಅವರೊಂದಿಗಿನ ಒಡನಾಟವು ನನ್ನಲ್ಲಿ ಸ್ಫೂರ್ತಿ ತುಂಬುತ್ತಿತ್ತು, ಸೂಫಿ ತತ್ವಗಳಿಂದ ಸಮಾಜಕ್ಕೆ ಆಧ್ಯಾತ್ಮಿಕ ಮಾರ್ಗದರ್ಶನ ನೀಡುವುದರ ಜೊತೆಜೊತೆಗೆ ವೈಜ್ಞಾನಿಕ ಮನೋಭಾವದಿಂದಲೂ ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.

ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಶಿಕ್ಷಣದಿಂದ ಸಮಾಜದ ಏಳಿಗೆಗೆ ಶ್ರಮಿಸಿದ ಅವರ ಸಮಾಜಮುಖಿ ಕಾಳಜಿಯು ಸದಾ ಸ್ಮರಣಿಯವಾದದು. ಜಿಲ್ಲೆಯಲ್ಲಿ ಶರಣ ಗುಡಿಯೊಂದಿಗೆ ಬಂದೇ ನವಾಜ್ ದರ್ಗಾವನ್ನು ಬೆಸೆದು ಸಮಾಜಕ್ಕೆ ಭಾವೈಕ್ಯತೆಯ ಸಂದೇಶ ಸಾರುವ ನಿಟ್ಟಿನಲ್ಲಿ ಅವರ ಕಾರ್ಯಗಳು ನೆನಪಿನಲ್ಲಿ ಉಳಿಯುವಂತಹದ್ದು ಎಂದರು. Priyank kharg

ಅವರ ಅಗಲಿಕೆಯಿಂದ ದುಃಖಿತನ್ನಾಗಿದ್ದೇನೆ,ಅವರ ಬಂಧುಗಳು, ಅನುಯಾಯಿಗಳ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಖನೀಝ್ ಫಾತೀಮಾ, ಕುಡಾ ಅಧ್ಯಕ್ಷರಾದ ಮಜರ್ ಅಲಾಂ‌ ಖಾನ್, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ನಗರ ಪೊಲೀಸ್ ಕಮೀಷನರ್ ಡಾ. ಶರಣಪ್ಪ ಢಗೆ, ಎಸ್.ಪಿ ಅಡ್ಡೂರು ಶ್ರೀನಿವಾಸಲು, ಜಿಪಂ‌ ಸಿಇಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ‌ ಕಮೀಷನರ್ ಭುವನೇಶ್ ಪಾಟೀಲ್ ಸೇರಿದಂತೆ ಹಲವರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...