ಶಕುಂತಲಾ ಬಸವರಾಜ ಭೀಮಳ್ಳಿ ಇನ್ನಿಲ್ಲ, ಶಾಲೆಗೆ ರಜೆ ಘೋಷಣೆ

Date:

Share post:

ಕಲಬುರಗಿ: ನಗರದ ಮಕ್ಕಂಪುರ ಬಡಾವಣೆ ನಿವಾಸಿ, ಮದರ್ ತೆರೇಸಾ ಶಾಲೆಯ ಆಡಳಿತ ಮಂಡಳಿ ಸದಸ್ಯೆ ಶಕುಂತಲಾ ಭೀಮಳ್ಳಿ (77) ಶುಕ್ರವಾರ ನಿಧನರಾದರು.

ಅವರಿಗೆ ಪತಿ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಬಸವರಾಜ ಭೀಮಳ್ಳಿ, ಎಚ್‌ಕೆಇ ಸಂಸ್ಥೆಯ ಹಾಲಿ ಉಪಾಧ್ಯಕ್ಷ ರಾಜಾ ಭೀಮಳ್ಳಿ ಸೇರಿದಂತೆ ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.

ಬಸವ ಸಮಿತಿಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಶಕುಂತಲಾ ಭೀಮಳ್ಳಿ ಅವರು ಇತ್ತೀಚೆಗೆ ನಡೆದ ಮಹಾದೇವಿಯಕ್ಕಗಳ ಸಮ್ಮೇಳನದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು.

ಮೃತರ ಅಂತ್ಯಕ್ರಿಯೆಯು ನಗರದ ಹುಮನಾಬಾದ್ ರಸ್ತೆಯ ಗಂಜ್ ಪ್ರದೇಶದ ಅವರ ದಾಲ್ ಮಿಲ್ ಆವರಣದಲ್ಲಿ ಶನಿವಾರ ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರ ಗೌರವಾರ್ಥ ಅವರು ಆಡಳಿತ ಮಂಡಳಿ ಸದಸ್ಯರಾಗಿರುವ ಕಲಬುರಗಿಯ ಮದರ್ ತೆರೆಸಾ ಶಾಲೆಗೆ ಶನಿವಾರ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...