ಶಕುಂತಲಾ ಬಸವರಾಜ ಭೀಮಳ್ಳಿ ಇನ್ನಿಲ್ಲ, ಶಾಲೆಗೆ ರಜೆ ಘೋಷಣೆ

Date:

Share post:

ಕಲಬುರಗಿ: ನಗರದ ಮಕ್ಕಂಪುರ ಬಡಾವಣೆ ನಿವಾಸಿ, ಮದರ್ ತೆರೇಸಾ ಶಾಲೆಯ ಆಡಳಿತ ಮಂಡಳಿ ಸದಸ್ಯೆ ಶಕುಂತಲಾ ಭೀಮಳ್ಳಿ (77) ಶುಕ್ರವಾರ ನಿಧನರಾದರು.

ಅವರಿಗೆ ಪತಿ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಬಸವರಾಜ ಭೀಮಳ್ಳಿ, ಎಚ್‌ಕೆಇ ಸಂಸ್ಥೆಯ ಹಾಲಿ ಉಪಾಧ್ಯಕ್ಷ ರಾಜಾ ಭೀಮಳ್ಳಿ ಸೇರಿದಂತೆ ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.

ಬಸವ ಸಮಿತಿಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಶಕುಂತಲಾ ಭೀಮಳ್ಳಿ ಅವರು ಇತ್ತೀಚೆಗೆ ನಡೆದ ಮಹಾದೇವಿಯಕ್ಕಗಳ ಸಮ್ಮೇಳನದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು.

ಮೃತರ ಅಂತ್ಯಕ್ರಿಯೆಯು ನಗರದ ಹುಮನಾಬಾದ್ ರಸ್ತೆಯ ಗಂಜ್ ಪ್ರದೇಶದ ಅವರ ದಾಲ್ ಮಿಲ್ ಆವರಣದಲ್ಲಿ ಶನಿವಾರ ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರ ಗೌರವಾರ್ಥ ಅವರು ಆಡಳಿತ ಮಂಡಳಿ ಸದಸ್ಯರಾಗಿರುವ ಕಲಬುರಗಿಯ ಮದರ್ ತೆರೆಸಾ ಶಾಲೆಗೆ ಶನಿವಾರ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...