ಶಕುಂತಲಾ ಬಸವರಾಜ ಭೀಮಳ್ಳಿ ಇನ್ನಿಲ್ಲ, ಶಾಲೆಗೆ ರಜೆ ಘೋಷಣೆ

Date:

Share post:

ಕಲಬುರಗಿ: ನಗರದ ಮಕ್ಕಂಪುರ ಬಡಾವಣೆ ನಿವಾಸಿ, ಮದರ್ ತೆರೇಸಾ ಶಾಲೆಯ ಆಡಳಿತ ಮಂಡಳಿ ಸದಸ್ಯೆ ಶಕುಂತಲಾ ಭೀಮಳ್ಳಿ (77) ಶುಕ್ರವಾರ ನಿಧನರಾದರು.

ಅವರಿಗೆ ಪತಿ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಬಸವರಾಜ ಭೀಮಳ್ಳಿ, ಎಚ್‌ಕೆಇ ಸಂಸ್ಥೆಯ ಹಾಲಿ ಉಪಾಧ್ಯಕ್ಷ ರಾಜಾ ಭೀಮಳ್ಳಿ ಸೇರಿದಂತೆ ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.

ಬಸವ ಸಮಿತಿಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಶಕುಂತಲಾ ಭೀಮಳ್ಳಿ ಅವರು ಇತ್ತೀಚೆಗೆ ನಡೆದ ಮಹಾದೇವಿಯಕ್ಕಗಳ ಸಮ್ಮೇಳನದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು.

ಮೃತರ ಅಂತ್ಯಕ್ರಿಯೆಯು ನಗರದ ಹುಮನಾಬಾದ್ ರಸ್ತೆಯ ಗಂಜ್ ಪ್ರದೇಶದ ಅವರ ದಾಲ್ ಮಿಲ್ ಆವರಣದಲ್ಲಿ ಶನಿವಾರ ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರ ಗೌರವಾರ್ಥ ಅವರು ಆಡಳಿತ ಮಂಡಳಿ ಸದಸ್ಯರಾಗಿರುವ ಕಲಬುರಗಿಯ ಮದರ್ ತೆರೆಸಾ ಶಾಲೆಗೆ ಶನಿವಾರ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...