ಕಲಬುರಗಿ| ಕನ್ನಡಿಗರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸಲಿ: ದತ್ತಾತ್ರೇಯ ಪಾಟೀಲ ರೇವೂರ

Date:

Share post:

ಕಲಬುರಗಿ : ನಾಡಿನ ನೆಲ-ಜಲ ಹಾಗೂ ಭಾಷೆ, ಸಂಸ್ಕೃತಿಗೆ ಧಕ್ಕೆ ಬಂದಾಗ ಎಲ್ಲಾ ಕನ್ನಡಿಗರು ಒಂದಾಗಿರಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಹೇಳಿದರು.

ನಗರದ ಕನ್ನಡ ಭವನದಲ್ಲಿ ಸೋಮವಾರ ಜರುಗಿದ ಕನ್ನಡ ಸಾಹಿತ್ಯ ಪರಿಷತ್ತಿನ 111 ನೇ ಸಂಸ್ಥಾಪನಾ ದಿನಾಚರಣೆ ಹಾಗೂ ವಿಶೇಷ-ವೈವಿಧ್ಯಮಯ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕನ್ನಡಿಗರ ಅಸ್ಮಿತೆಗೆ ಕಿಂಚಿತ್ತು ಧಕ್ಕೆಯಾಗಬಾರದು. ಮಾತೃಭಾಷೆಯೇ ನಮಗೆಲ್ಲ ಸ್ಪೂರ್ತಿದಾಯಕ ಮತ್ತು ಹೃದಯ ಶ್ರೀಮಂತಿಕೆ ಹೆಚ್ಚಿಸುತ್ತದೆ. ಇತ್ತೀಚೆಗೆ ಕಾಶ್ಮೀರ ಭಯೋತ್ಪಾದಕರ ದಾಳಿಯಿಂದ ಕನ್ನಡಿಗರಿಬ್ಬರ ಜೀವ ಕಳೆದು ಕೊಂಡoತ್ತಾಗಿದೆ. ಅಂಥ ಸಂದಿಗ್ಧ ಸನ್ನಿವೇಶದಲ್ಲಿ ಕನ್ನಡಿಗರ ಹೃದಯವಂತಿಕೆ, ಭಾಷಾಭಿಮಾನ ಹಾಗೂ ಪರಸ್ಪರ ಸಹಕಾರ ಮನೋಭಾವ ಹೆಚ್ಚಿಸುತ್ತದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯಲ್ಲಿ ನಿರಂತರವಾಗಿ ಕನ್ನಡಿಗರ ಸೇವಾ ಕಾರ್ಯಗಳಿಗೆ ಬದ್ಧರಾಗಿ ಸೇವಾ ಮಾಡಿ ನಾಡಿಗೆ ಮಾದರಿಯಾಗಿ ಕನ್ನಡ ಕಟ್ಟುವ ಕಾಯಕ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. kalaburag

ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕನ್ನಡ ಕಳಕಳಿಯುಳ್ಳವರು ಯಾವುದೇ ತರಗತಿ ಇರಲಿ, ಮಕ್ಕಳನ್ನು ಜಾತಿ-ಧರ್ಮಗಳ ಗೋಡೆಯಿಂದ ನೋಡಬಾರದು. ತಂದೆ-ತಾಯಿ, ವಿದ್ಯಾ ಗುರುಗಳ ಮೇಲೆ ನಂಬಿಕೆಯನ್ನಿಟ್ಟು ಯಶಸ್ವಿ ಕಾರ್ಯ ಕೈಗೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮುಖ್ಯವಾಗಿದೆ. ಭಯ ಇಲ್ಲದೆಯೇ ಗುರಿಯತ್ತ ಹೆಜ್ಜೆ ಹಾಕಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಅವರು, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಕೇತವಾಗಿದೆ. ನಮ್ಮ ನಾಡು-ನುಡಿ, ನೆಲ-ಜಲ, ಸಂಸ್ಕೃತಿ ಸಾಹಿತ್ಯವನ್ನು ರಕ್ಷಿಸಿ ಬೆಳೆಸುವಲ್ಲಿ ಸಾಹಿತ್ಯ ಪರಿಷತ್ ಪ್ರಮುಖ ಪಾತ್ರ ವಹಿಸಿದೆ. ಭಾಷೆ ಮತ್ತು ಸಾಹಿತ್ಯ ನಮ್ಮೆಲ್ಲರನ್ನು ಮುಖಾಮುಖಿಯಾಗಿಸಿದೆ. ಒಗ್ಗೂಡಿಸುವ ಶಕ್ತಿಯನ್ನು ಕನ್ನಡ ಭಾಷೆ ಮತ್ತು ಸಾಹಿತ್ಯ ಹೊಂದಿದೆ ಎಂದು ತಿಳಿಸಿದರು.

ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ ಮಾತನಾಡಿ, ನೆಲ-ಜಲದ ಪ್ರಶ್ನೆ ಎದುರಾದಾಗ ಯಾರು ಕೂಡ ಪ್ರಶ್ನೆ ಮಾಡದೇ ಒಂದಾಗಿ ಹಕ್ಕಿನ ಸಲುವಾಗಿ ಹೋರಾಟ ಮಾಡಬೇಕಿದೆ. ಜಿಲ್ಲೆಯಲ್ಲಿ ಸಾಂಸ್ಕೃತಿಕ ವಾತಾವರಣ ಮೂಡಿಸುವುದರ ಜತೆಗೆ ಹೊಸ ಮುಖಗಳಿಗೆ ಪರಿಷತ್ತು ಆದ್ಯತೆ ಕೊಡುತ್ತಿರುವುದು ಅವರಲ್ಲಿನ ಪ್ರತಿಭಾ ಅನಾವರಣಕ್ಕೆ ಅವಕಾಶ ಮಾಡಿಕೊಡುತ್ತಿದೆ ಎಂದರು.

ಹಿರಿಯ ಸಾಹಿತಿ ಡಾ. ನಾಗಾಬಾಯಿ ಬುಳ್ಳಾ ಮಾತನಾಡಿ, ಕನ್ನಡ ನಾಡು ಸಾಹಿತ್ಯಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಉನ್ನತ ಪರಂಪರೆ ಹೊಂದಿದೆ. ಪರಿಷತ್ತು ಕನ್ನಡ ನಾಡಿಗೆ ವಿಶೇಷ ಕೊಡುಗೆ ನೀಡಿದೆ. ಕಲಬುರಗಿ ಜಿಲ್ಲೆಯಲ್ಲೂ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಕ್ರಿಯಾಶೀಲವಾಗಿ ನಡೆಯುತ್ತಿವೆ ಎಂದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸುರೇಶ ಅಕ್ಕಣ್ಣಾ, ಗುರೂಜಿ ಪದವಿ ಮಹಾವಿದ್ಯಾಲಯದ ಅಧ್ಯಕ್ಷ ಕಲ್ಯಾಣಕುಮಾರ ಶೀಲವಂತ, ಜಿಲ್ಲಾ ಕಸಾಪ ದ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಸಿದ್ಧಲಿಂಗ ಬಾಳಿ, ರಾಜೇಂದ್ರ ಮಾಡಬೂಳ, ರವೀಂದ್ರಕುಮಾರ ಭಂಟನಳ್ಳಿ, ಶಕುಂತಲಾ ಪಾಟೀಲ ಜಾವಳಿ, ಜ್ಯೋತಿ ಕೋಟನೂರ ಮಾತನಾಡಿದರು.

 

ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರುಗಳಾದ ಹಿರಿಯ ಸಾಹಿತಿಗಳಾದ ಡಾ. ನಾಗಾಬಾಯಿ ಬುಳ್ಳಾ, ಸಿದ್ಧರಾಮ ಪೊಲೀಸ್ ಪಾಟೀಲ, ಡಾ. ಕಲ್ಯಾಣರಾವ ಜಿ ಪಾಟೀಲ ಅವರನ್ನು ಪರಿಷತ್ತಿನ ವತಿಯಿಂದ ವಿಶೇಷವಾಗಿ ಸತ್ಕರಿಸಲಾಯಿತು.

 

ಕಸಾಪ ದ ಹಿರಿಯ ಸದಸ್ಯರಾದ ರಾಚಪ್ಪ ಮುಗುಳಿ, ರೇವಪ್ಪ ಬೊಮ್ಮನ, ಸೈಯ್ಯದ್ ನಜಿರುದ್ದೀನ್ ಮುತ್ತವಲಿ, ಸುರೇಶ ಭರಣಿ, ಸೋಮಶೇಖರ ನಂದಿಧ್ವಜ, ಶಿವಾನಂದ ಮಠಪತಿ, ಕೆ.ಬಸವರಾಜ, ವಿಶ್ವ ಕಾಮರೆಡ್ಡಿ, ಮೈಲಾರಿ ಪೂಜಾರಿ ಅವರನ್ನೂ ಸಹ ಸತ್ಕರಿಸಲಾಯಿತು.

 

ಪ್ರಸಕ್ತ ಸಾಲಿನ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯ ಕನ್ನಡದಲ್ಲಿ ಅತೀ ಹೆಚ್ಚು ಅಂಕಗಳು ಪಡೆದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಇಲ್ಲಿನ ಗುರೂಜಿ ಪದವಿ ಕಾಲೇಜಿನ ಸಹಕಾರದೊಂದಿಗೆ ಪರಿಷತ್ತು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...