ಕಲಬುರಗಿ: ಡೆಂಗ್ಯೂ ಮೆನಿಂಗೋಎನ್ಸೆಫಲೈಟಿಸ್ ರೋಗಿಯ ಜೀವ ಉಳಿಸಿದ ಬಸವೇಶ್ವರ ಆಸ್ಪತ್ರೆ ವೈದ್ಯರು

Date:

Share post:

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಮಾರಕ ಡೆಂಗ್ಯೂ ಮೆನಿಂಗೋಎನ್ಸಫಲೈಟಿಸ್ ನಿಂದ ಬಳಲುತ್ತಿದ್ದ ರೋಗಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿ ರೋಗಿಯನ್ನು ಪ್ರಾಣಾಪಾಯದಿಂದ ಪಾರು ಮಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕಲಬುರಗಿಯ ಇಬ್ರಾಹಿಂಪೂರ ನಿವಾಸಿಯಾಗಿರುವ ಅಭಿಷೇಕ ಎಂಬ 25 ವರ್ಷದ ಯುವಕ ಬ ಅತಿಯಾದ ಮೆದುಳಿನ ಜ್ವರದಿಂದ ಬಳಲುತ್ತಿದ್ದು ಅವನ ಕುಟುಂಬದವರು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯ ವೈದ್ಯ ಸಿಬ್ಬಂದಿ ಅವನನ್ನು ಪರೀಕ್ಷಿಸಿದಾಗ ಅವನಿಗೆ ಅಪಾಯಕಾರಿ ವೈರಲ್ ಮೆನಿಂಗೋಎನ್ಸಪೇಲೈಟಿಸ್, ಹೈಪೋವೋಲೆಮಿಕ್ ಶಾಕ್, ಥ್ರೋಂಬೋಸೈಟೋಪಿನಿಯಾ ಮತ್ತು ಉಸಿರಾಟದ ತೊಂದರೆ ಇರುವುದು ತಿಳಿಯಿತು. ಅವರು ಅತಿಯಾದ ಜ್ವರದೊಂದಿಗೆ ಕೋಮಾ ಸ್ಥಿತಿಯಲ್ಲಿ ಇದ್ದರು.ಕಡಿಮೆ ಬಿಪಿ ಹಾಗೂ ಆಮ್ಲಜನಕ ಮಟ್ಟ ತೀವ್ರ ಕುಸಿದಿತ್ತು ಕೂಡಲೆ ಆಸ್ಪತ್ರೆಯ ನುರಿತ ವೈದ್ಯರಾದ ಡಾ ಸುರೇಶ್ ಹರಸೂರ ಅವರ ಮಾರ್ಗದರ್ಶನದಲ್ಲಿ ವೆಂಟಿಲೇಟರ್ ಇನೋಟ್ರೋಪಗಳ ಸಹಾಯದಿಂದ ICCU ಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲು ಆರಂಭಿಸಲಾಯಿತು.

ನಂತರ ಕಾನ್ಟ್ರಾಂಸ್ಟ ಎಂ ಆರ್ ಐ ಮಾಡಿದಾಗ ಮೆನಿಂಜಿಯಲ್ ಎನ್ಹಾನ್ಸಮೆಂಟ್ ಕಂಡು ಬಂದಿತು. ಮತ್ತು ಜ್ವರದ ಪರೀಕ್ಷೆಯಲ್ಲಿ ಡೆಂಗ್ಯೂ ಧೃಡ ಪಟ್ಟಿತು. ಪ್ಲೇಟ್ಲೆಟ್ ಸಂಖ್ಯೆ ಅಪಾಯಕಾರಿ ಸ್ಥೀತಿಯಲ್ಲಿ ಕಡಿಮೆಯಾಗಿತ್ತು. ಇವುಗಳನ್ನೆಲ್ಲ ಗಮನದಲ್ಲಿಟ್ಟುಕೊಂಡು ಸೂಕ್ಷ್ಮವಾಗಿ ಹಾಗೂ ಪರಿಣಾಮಕಾರಿ ಚಿಕಿತ್ಸೆ ನೀಡಲಾಯಿತು ಇದರಿಂದಾಗಿ ಅವರ ಅಪಾಯಕಾರಿ ಆಮ್ಲಜನಕ ಮಟ್ಟ ಏರಿಕೆ ಕಂಡು ಸಾಮಾನ್ಯ ಸ್ಥಿತಿಗೆ ತಲುಪಿದಾಗ ವೆಂಟಿಲೇಟರ್ ರಿಂದ ಮುಕ್ತಗೊಳಿಸಿ ಚಿಕಿತ್ಸೆ ಮುಂದುವರಿಸಲಾಯಿತು ಅಪಾಯಕಾರಿ ಸ್ಥಿತಿಯಲ್ಲಿದ್ದ ರೋಗಿ ಚಿಕಿತ್ಸೆಗೆ ಸ್ಪಂದಿಸಿ ಈಗ ಸಂಪೂರ್ಣ ಗುಣಮುಖರಾಗಿದ್ದಾರೆ.

ಈ ವೈದ್ಯಕೀಯ ಸೇವೆ ನೀಡಿದ ತಂಡದಲ್ಲಿ ಯುನಿಟ್ ಮುಖ್ಯಸ್ಥರಾದ ಡಾ ಸುರೇಶ್ ಹರಸೂರ,ಡಾ ಶರಣಬಸಪ್ಪ ನಂದ್ಯಾಳ,ಡಾ ಸ್ವೇತಾ, ಡಾ ಶರದ್ ಬಿರಾದಾರ ಐಸಿಯು ತಂಡದ ನೇತೃತ್ವ ಡಾ ಸೋಹೈಲ್ ಹಾಗೂ ಪಿಜಿ ವಿದ್ಯಾರ್ಥಿಗಳು ಇದ್ದರು.

ಇಂತಹ ಅಪಾಯಕಾರಿ ರೋಗಿಗೆ ಯಶಸ್ವಿ ಚಿಕಿತ್ಸೆ ನೀಡಿ ಗುಣಮುಖ ಮಾಡಿದ ಆಸ್ಪತ್ರೆಯ ವೈದ್ಯರ ತಂಡಕ್ಕೆ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ.ನಮೋಶಿ ಹಾಗೂ ಉಪಾಧ್ಯಕ್ಷರಾದ ರಾಜಾ ಭಿ.ಭೀಮಳ್ಳಿ ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ ಜಂಟಿ ಕಾರ್ಯದರ್ಶಿಗಳಾದ ಡಾ.ಕೈಲಾಸ ಪಾಟೀಲ್ ಆಸ್ಪತ್ರೆಯ ಸಂಚಾಲಕರಾದ ಡಾ ಕಿರಣ್ ದೇಶಮುಖ್ ಹಾಗೂ ಎಲ್ಲ ಆಡಳಿತ ಮಂಡಳಿ ಸದಸ್ಯರು ವೈದ್ಯಕೀಯ ಅಧೀಕ್ಷಕರಾದ ಡಾ.ಆನಂದ ಗಾರಂಪಳ್ಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...