ಕಲಬುರಗಿ| ರೂಪಾ ಪೂಜಾರಿ ಅವರ ‘ಕನಸಿನ ಭಾವನೆ’ ಕೃತಿ ಜನಾರ್ಪಣೆ

Date:

Share post:

ಕಲಬುರಗಿ: ನಮ್ಮ ಮನದಲ್ಲಿ ಅರಳುವ ಭಾವನೆಗಳು ಸದಾ ಸಮಾಜಮುಖಿಯಾಗಿದ್ದರೆ ಬದಲಾವಣೆ ಸಾಧ್ಯ ಎಂದು ಪಾಳಾ ಕಟ್ಟಿಮನಿ ಹಿರೇಮಠ ಸಂಸ್ಥಾನದ ಡಾ. ಗುರುಮೂರ್ತಿ ಶಿವಾಚಾರ್ಯರು ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ರವಿವಾರ ಏರ್ಪಡಿಸಿದ ಯುವ ಲೇಖಕಿ ಕು.ರೂಪಾ ಪೂಜಾರಿ ಯವರ ಕನಸಿನ ಭಾವನೆ ಎಂಬ ಚೊಚ್ಚಲ ಕೃತಿ ಜನಾರ್ಪಣೆ ಸಮಾರಂಭದಲ್ಲಿ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಪ್ರತಿಭೆಗೆ ಬಡತನ ಅಡ್ಡಿ ಆಗದು. ಆ ಬಡತನದಲ್ಲಿ ಅರಳುವ ಭಾವನೆಗಳು ಅಕ್ಷರ ರೂಪಕ್ಕಿಳಿದಾಗ ಗಟ್ಟಿ ಸಾಹಿತ್ಯ ಹುಟ್ಟಿಕೊಳ್ಳುತ್ತದೆ. ಅದು ಮುಂದೆ ಭವಿಷ್ಯದ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದ ಅವರು, ಲೇಖಕಿ ರೂಪಾ ಪೂಜಾರಿಕ ಅವರ ಕೃತಿ ಕನ್ನಡ ಸಾರಸ್ವತ ಲೋಕಕ್ಕೆ ಮಾದರಿಯಾಗಲಿ. ಅವಳ ಪ್ರತಿಭೆ ಛಲ ಮತ್ತು ಗುರಿ ಮೆಚ್ಚುವಂಥದು. ತಂದೆ, ತಾಯಿ ಮತ್ತು ವಂಶ ಋಣಗಳು ಬದುಕಿನ ಬೆಳಕಾಗಿವೆ ಎಂದರು.

ಕೃತಿ ಪರಿಚಯಿಸಿದ ಲೇಖಕಿ-ಶಿಕ್ಷಕಿ ಅನುಪಮಾ ಅಪಗುಂಡೆ, ಗಾಂಭೀರತೆ ಮತ್ತು ಪ್ರಜ್ಞಾ ಪೂರ್ವಕವಾಗಿ ಬದುಕಲು ಕೃತಿ ಮುಖ್ಯವಾಗಿದೆ. ಚಿಂತನಶೀಲ ನುಡಿಮುತ್ತುಗಳು ಜೀವನದ ನಾಡಿಯಂತೆ ಕ್ರಿಯಾತ್ಮಕವಾಗಿವೆ. ಸಂಸ್ಕಾರಯುತ ಬದುಕಿಗೆ ಸ್ಪೂರ್ತಿ ತುಂಬುತ್ತವೆ. ಈ ಕೃತಿ ಕನ್ನಡ ಸಾಹಿತ್ಯ ಶ್ರೀಮಂತಿಕೆಗೆ ಪೂರಕವಾಗಲಿ ಎಂದು ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಬರೆಯುವ ಮನಸ್ಸು ಮತ್ತು ಸಹಜತೆಮ ಇದ್ದರೆ ಸಾಕು ಅವನೊಬ್ಬ ಕವಿ-ಲೇಖಕಯಾಗಲು ಸಾಧ್ಯ ಎನ್ನುವುದಕ್ಕೆ ಕು. ರೂಪಾ ಪೂಜಾರಿ ಉಧಾಹರಣೆ. ಇಂಥ ಯುವ ಬರಹಗಾರರಿಗೆ ಪರಿಷತ್ತು ಸದಾ ಕಾಲ ಪ್ರೋತ್ಸಾಹ, ಮಾರ್ಗದರ್ಶನ ನೀಡುತ್ತಾ ಬರುತ್ತಿದೆ. ಬರಹಗಾರನ ಜೀವನಾನುಭವವೇ ಆತನ ಸಾಹಿತ್ಯದ ಸಾರವಾಗಿರುತ್ತದೆ. ಈ ನಿಟ್ಟಿನಲ್ಲಿ ಹೊಸ ಸಮಾಜದ ನಿರ್ಮಾಣಕ್ಕೆ ಪರಿಷತ್ತು ಹೊಸ ಮಾರ್ಗದಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಶಿಕ್ಷಕರಾದ ಗೀತಾ ಭರಣಿ, ಕಲ್ಲಾಲಿಂಗ ದಿಕ್ಸಂಗಿಕರ್, ಲೇಖಕಿ ತಂದೆ ತಾಯಿಯಾದ ಶಿವಪುತ್ರ ಪೂಜಾರಿ, ಗುರುಬಾಯಿ ಪೂಜಾರಿ, ರವೀಂದ್ರಕುಮಾರ ಭಂಟನಳ್ಳಿ ಮಾತನಾಡಿದರು.  ಪ್ರಮುಖರಾದ ರಾಜೇಂದ್ರ ಮಾಡಬೂಳ, ಶಿಲ್ಪಾ ಜೋಶಿ, ಶಕುಂತಲಾ ಪಾಟೀಲ, ಕಲ್ಯಾಣಕುಮಾರ ಶೀಲವಂತ, ಎಂ.ಎನ್. ಸುಗಂಧಿ, ದಿನೇಶ ಮದಕರಿ, ಗಣೇಶ ಚಿನ್ನಾಕಾರ, ಮಲ್ಲಿಕಾರ್ಜುನ ಇಬ್ರಾಹಿಂಪುರ, ಸಿ.ಎಸ್. ಮಾಲಿಪಾಟೀಲ, ಶಿವಾನಂದ ಮಠಪತಿ, ವೀಣಾ ಜಿ.ಕೆ., ರಮೇಶ ಡಿ ಬಡಿಗೇರ, ಚಂದ್ರಕಾoತ ಸೂರನ್, ಅರುಂಧತಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...