ಕಲಬುರಗಿ| ಗೋದುತಾಯಿ ಕಾಲೇಜಿನಲ್ಲಿ ಒಂದು ದಿನದ ರಾಜ್ಯ ಮಟ್ಟದ ವಿಚಾರಸಂಕಿರಣ

Date:

Share post:

ಕಲಬುರಗಿ : ಇಂಗ್ಲೀಷ್ ಸಾಹಿತ್ಯವು ಬಹಳ ಹಳೆಯ ಶ್ರೇಷ್ಠ ಸಾಹಿತ್ಯವಾಗಿದೆ ಎಂದು ಪುದುಚರಿ ಕರಿಕಲ್ ಅರಿಗರ ಅಣ್ಣ ಸರಕಾರಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಬಿಲಿಯನಸಿದ್ದ ಕೆ.ಪೈಗೊಂಡೆ ಹೇಳಿದರು.

ನಗರದ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ರವಿವಾರ ಇಂಗ್ಲೀಷ್ ವಿಭಾಗದಿಂದ ಹಮ್ಮಿಕೊಂಡ ಹಿಸ್ಟರಿ ಆಫ್ ಇಂಗ್ಲೀಷ್ ಲಿಟರೇಚರ್ ಆನ್ ಎಕ್ಸಪ್ಲೋರೇಷನ್ ಎಂಬ ವಿಷಯ ಕುರಿತು ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಇಂಗ್ಲೀಷ್ ಸಾಹಿತ್ಯವು ಇಂಗ್ಲೀಷ್ ಮಾತನಾಡುವ ಪ್ರಪಂಚದಿoದ ಇಂಗ್ಲೀಷ್ ಭಾಷೆಯಲ್ಲಿ ಬರೆಯಲ್ಪಟ್ಟ ಸಾಹಿತ್ಯವಾಗಿದೆ. ಇದು 1400 ವರ್ಷಗಳಿಗೂ ಹೆಚ್ಚು ಕಾಲ ಅಭಿವೃದ್ಧಿಗೊಂಡಿದೆ. ಕವಿ ಮತ್ತು ನಾಟಕಕಾರ ವಿಲಿಯಂ ಶೇಕ್ಸಪಿಯರ್ ಇಂಗ್ಲೀಷ್ ಭಾಷೆಯ ಶ್ರೇಷ್ಠ ಬರಹಗಾರರಾಗಿ ಇಂಗ್ಲೀಷ್ ಸಾಹಿತ್ಯವನ್ನು ಶ್ರೀಮಂತಗೊಳಿಸಿದರು. 16ನೇ ಶತಮಾನದ ಅಂತ್ಯ ಮತ್ತು 18ನೇ ಶತಮಾನದ ಆರಂಭದ ನಡುವೆ ಬ್ರಿಟಿಷ್ ಸಾಮ್ರಾಜ್ಯದ ಬೆಳವಣಿಗೆಯೊಂದಿಗೆ ಇಂಗ್ಲೀಷ್ ಭಾಷೆ ಪ್ರಪಂಚದಾದ್ಯoತ ಹರಿಡಿತು ಎಂದು ಇಂಗ್ಲೀಷ್ ಸಾಹಿತ್ಯದ ಇತಿಹಾಸದ ಮೇಲೆ ಬೆಳಕು ಚೆಲ್ಲಿದರು ಎಂದರು.

ವೇದಿಕೆ ಮೇಲೆ ಪ್ರಾಧ್ಯಾಪಕರಾದ ಡಾ.ಸೀಮಾ ಪಾಟೀಲ, ಕೃಪಾಸಾಗರ ಗೊಬ್ಬುರ್ ಇದ್ದರು. ಪ್ರೀತಿ ಬಿರಾದಾರ ಮುಖ್ಯ ಅತಿಥಿಗಳ ಪರಿಚಯ ಮಾಡಿದರೆ, ಭೀಮಸೇನ್ ಜೋಷಿ ಸ್ವಾಗತಿಸಿದರು. ಕು.ಜವೇರಿಯಾ ಅಂಜುಮ್‌ಶೇಖ ನಿರೂಪಿಸಿ, ವಂದಿಸಿದರು. ಕು.ಸ್ಪೂರ್ತಿ ಪಾಂಚಾಳ ಪ್ರಾರ್ಥಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...