ಕಲಬುರಗಿ| ಗೋದುತಾಯಿ ಕಾಲೇಜಿನಲ್ಲಿ ಒಂದು ದಿನದ ರಾಜ್ಯ ಮಟ್ಟದ ವಿಚಾರಸಂಕಿರಣ

Date:

Share post:

ಕಲಬುರಗಿ : ಇಂಗ್ಲೀಷ್ ಸಾಹಿತ್ಯವು ಬಹಳ ಹಳೆಯ ಶ್ರೇಷ್ಠ ಸಾಹಿತ್ಯವಾಗಿದೆ ಎಂದು ಪುದುಚರಿ ಕರಿಕಲ್ ಅರಿಗರ ಅಣ್ಣ ಸರಕಾರಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಬಿಲಿಯನಸಿದ್ದ ಕೆ.ಪೈಗೊಂಡೆ ಹೇಳಿದರು.

ನಗರದ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ರವಿವಾರ ಇಂಗ್ಲೀಷ್ ವಿಭಾಗದಿಂದ ಹಮ್ಮಿಕೊಂಡ ಹಿಸ್ಟರಿ ಆಫ್ ಇಂಗ್ಲೀಷ್ ಲಿಟರೇಚರ್ ಆನ್ ಎಕ್ಸಪ್ಲೋರೇಷನ್ ಎಂಬ ವಿಷಯ ಕುರಿತು ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಇಂಗ್ಲೀಷ್ ಸಾಹಿತ್ಯವು ಇಂಗ್ಲೀಷ್ ಮಾತನಾಡುವ ಪ್ರಪಂಚದಿoದ ಇಂಗ್ಲೀಷ್ ಭಾಷೆಯಲ್ಲಿ ಬರೆಯಲ್ಪಟ್ಟ ಸಾಹಿತ್ಯವಾಗಿದೆ. ಇದು 1400 ವರ್ಷಗಳಿಗೂ ಹೆಚ್ಚು ಕಾಲ ಅಭಿವೃದ್ಧಿಗೊಂಡಿದೆ. ಕವಿ ಮತ್ತು ನಾಟಕಕಾರ ವಿಲಿಯಂ ಶೇಕ್ಸಪಿಯರ್ ಇಂಗ್ಲೀಷ್ ಭಾಷೆಯ ಶ್ರೇಷ್ಠ ಬರಹಗಾರರಾಗಿ ಇಂಗ್ಲೀಷ್ ಸಾಹಿತ್ಯವನ್ನು ಶ್ರೀಮಂತಗೊಳಿಸಿದರು. 16ನೇ ಶತಮಾನದ ಅಂತ್ಯ ಮತ್ತು 18ನೇ ಶತಮಾನದ ಆರಂಭದ ನಡುವೆ ಬ್ರಿಟಿಷ್ ಸಾಮ್ರಾಜ್ಯದ ಬೆಳವಣಿಗೆಯೊಂದಿಗೆ ಇಂಗ್ಲೀಷ್ ಭಾಷೆ ಪ್ರಪಂಚದಾದ್ಯoತ ಹರಿಡಿತು ಎಂದು ಇಂಗ್ಲೀಷ್ ಸಾಹಿತ್ಯದ ಇತಿಹಾಸದ ಮೇಲೆ ಬೆಳಕು ಚೆಲ್ಲಿದರು ಎಂದರು.

ವೇದಿಕೆ ಮೇಲೆ ಪ್ರಾಧ್ಯಾಪಕರಾದ ಡಾ.ಸೀಮಾ ಪಾಟೀಲ, ಕೃಪಾಸಾಗರ ಗೊಬ್ಬುರ್ ಇದ್ದರು. ಪ್ರೀತಿ ಬಿರಾದಾರ ಮುಖ್ಯ ಅತಿಥಿಗಳ ಪರಿಚಯ ಮಾಡಿದರೆ, ಭೀಮಸೇನ್ ಜೋಷಿ ಸ್ವಾಗತಿಸಿದರು. ಕು.ಜವೇರಿಯಾ ಅಂಜುಮ್‌ಶೇಖ ನಿರೂಪಿಸಿ, ವಂದಿಸಿದರು. ಕು.ಸ್ಪೂರ್ತಿ ಪಾಂಚಾಳ ಪ್ರಾರ್ಥಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...