ಚಿಂಚೋಳಿ: ಶಾದಿಪುರ ಗ್ರಾಮ ಪಂಚಾಯತ್ ನ ಆಡಳಿತ ದೌರ್ಬಲ್ಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆಕ್ರೋಶ

Date:

Share post:

ಕಲಬುರಗಿ: ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ನಿರ್ಲಕ್ಷ್ಯ ಮತ್ತು ಆಡಳಿತದ ದೌರ್ಬಲ್ಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಜ್ಯೋತಿ ಅವರು ಕಚೇರಿಗೆ ನಿಯಮಿತವಾಗಿ ಹಾಜರಾಗದೇ, ಹಾಜರಾತಿ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಅವರ ನಿರ್ಲಕ್ಷ್ಯದಿಂದ ಕಚೇರಿಯ ದೈನಂದಿನ ಕಾರ್ಯಗಳು ವಿಳಂಬವಾಗುತ್ತಿದ್ದು, ಸಾರ್ವಜನಿಕ ಸೇವೆಗಳ ಗುಣಮಟ್ಟವು ಕುಸಿತಕ್ಕೀಡಾಗಿದೆ. ಹಳೆ ಕಾರ್ಯದರ್ಶಿಯವರು ನಿಷ್ಠೆಯಿಂದ ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದರು. ಆದರೆ ಇವರು ಎಲ್ಲಾ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದೇ ರೀತಿಯಲ್ಲಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಸಹ ಅನಿಯಮಿತ ಹಾಜರಾತಿಯಿಂದ ಆಡಳಿತಾತ್ಮಕ ವ್ಯವಹಾರಗಳಲ್ಲಿ ಗೊಂದಲ ಉಂಟಾಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗಬೇಕಾದ ಯೋಜನೆಗಳಲ್ಲಿ ವಿಳಂಬ ಉಂಟಾಗಿದೆ. ವಿಶೇಷವಾಗಿ ಮನರೇಗಾ ಯೋಜನೆಯಡಿಯಲ್ಲಿ ಕಾರ್ಮಿಕರಿಗೆ ಕೂಲಿ ಪಾವತಿಯಲ್ಲಿ ವಿಳಂಬವಾಗಿದೆ ಎಂದು ಸೇನೆಯ ಪದಾಧಿಕಾರಿಗಳು, ಚಿಂಚೋಳಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಲಿಂಬಾಜಿ ಚವ್ಹಾಣ್, ಜಗದೀಶ್, ಭಾಗ್ಯವಂತ್, ವಿಠಲ್ ಚವಾಣ್, ವಿನೋದ್ ಪವಾರ್, ಶಂಕರ್ ಪವಾರ್, ನರ್ಸಿಂಗ್ ಚೌಹಾಣ್, ಸುಭಾಷ್ ಸಿ ರಾಥೋಡ್, ಹೀರಾ ರಾಥೋಡ್, ಅರವಿಂದ್ ಜಾದವ್, ಪಂಡಿತ ಪವಾರ್ ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...