ಕಲಬುರಗಿ| ಯಾದಗಿರಿ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತರ ದಾಳಿ

Date:

Share post:

ಕಲಬುರಗಿ: ನಗರದ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಯಾದಗಿರಿ ಜಿಲ್ಲೆಯ ತಹಶೀಲ್ದಾರ್ ಉಮಾಕಾಂತ ಹಳ್ಳೆ ಅವರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ. ಇತ್ತ ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್ ಕಚೇರಿ ಮೇಲೂ ದಾಳಿ ಮಾಡಲಾಗಿದೆ. ಮನೆ ಮತ್ತು ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪ್ರಮುಖ ಕಡತಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್.ಇನಾಂದಾರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಇನ್ಸ್‌ಪೆಕ್ಟರ್ ಗಳಾದ ಸಿದ್ದರಾಯ, ಸಂಗಮೇಶ, ಅರ್ಜುನಪ್ಪ, ಅಕ್ಕಮಹಾದೇವಿ, ಬಾಬಾ ಸಾಹೇಬ ಪಾಟೀಲ್ ಅವರು ದಾಳಿಯ ತಂಡದಲ್ಲಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...