ಕಲಬುರಗಿ| ಕೇಂದ್ರ ಕಾರಾಗೃಹ ಕೈದಿಗಳಿಬ್ಬರ ನಡುವೆ ಗಲಾಟೆ: ಪ್ರಕರಣ ದಾಖಲು

Date:

Share post:

ಕಲಬುರಗಿ: ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿ ಕೈದಿಯೋರ್ವನ ಮೇಲೆ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.

ವಿಚಾರಣಾ ಕೈದಿ ತುಳಸಿರಾಮ್ ತಂದೆ ಪಂಡಿತ್ ಹರಿಜನ ಎಂಬಾತನ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕೈದಿ ತುಳಸಿರಾಮ್ ತಂದೆ ಪಂಡಿತ್ ಹರಿಜನ ಎಂಬಾತನು ಇನ್ನೋರ್ವ ವಿಚಾರಣಾ ಕೈದಿಯಾಗಿರುವ ಕಿರಣ್ ರಮೇಶ್ ಶೆಟ್ಟಿ ಎಂಬಾತನ ಮೇಲೆ ಪರ್ಸಿ ಕಲ್ಲಿನಿಂದ ಹಲ್ಲೆ ನಡೆಸಿ, ಗಾಯಗೊಳಿಸಿದ್ದಾನೆ. ಅಲ್ಲದೆ, ಕಾರಾಗೃಹಗಳ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಕಾರಣಕ್ಕಾಗಿ ತುಳಸಿರಾಮ್ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತುಳಸಿರಾಮ್ ಮತ್ತು ಕಿರಣ್ ಇಬ್ಬರೂ ಪರಸ್ಪರ ಮಾತನಾಡುತ್ತಿರುವಾಗಲೇ ಮಾತಿಗೆ ಮಾತು ಬೆಳೆದು ಏಕಾಏಕಿ ಇಬ್ಬರ ಮಧ್ಯೆ ಜಗಳವಾಗಿದೆ. ಈ ಸಂದರ್ಭದಲ್ಲಿ ತುಳಸಿರಾಮ್, ಕಿರಣ್ ಶೆಟ್ಟಿ ಮೇಲೆ ಎರಗಿ ಪರ್ಸಿ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಗಾಯಗೊಂಡ ಕಿರಣ್ ಶೆಟ್ಟಿಯನ್ನು ಕಾರಾಗೃಹದಲ್ಲೇ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದುಬಂದಿದೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...