ಕಲಬುರಗಿ| ಕಲಾವಿದ ರೆಹಮಾನ್ ಪಟೇಲ್ ಗೆ ಕರ್ನಾಟಕ ಲಲಿತಕಲಾ ಅಕಾಡೆಮಿ ಪ್ರಶಸ್ತಿ; ಮೇ23ರಂದು ಪ್ರದಾನ

Date:

Share post:

ಕಲಬುರಗಿ: ಕಲಾವಿದ ರೆಹಮಾನ ಪಟೇಲ್ ಅವರನ್ನು 2022–23ನೇ ಸಾಲಿನ 52ನೇ ವಾರ್ಷಿಕ ಕರ್ನಾಟಕ ರಾಜ್ಯ ಲಲಿತಕಲಾ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸಾಂಪ್ರದಾಯಿಕ ಲಘುಚಿತ್ರಕಲೆಯ ಕೃತಿ “ಮಧ್ಯಮದಿ ರಾಗ” ಈ ಪ್ರಶಸ್ತಿಗೆ ಆಯ್ಕೆಯಾಗಿದೆ. ಈ ಪ್ರಶಸ್ತಿಯಲ್ಲಿ 25,000 ನಗದು ಬಹುಮಾನ ಮತ್ತು ಪ್ರಮಾಣಪತ್ರವಿದೆ.

ಪ್ರಶಸ್ತಿ ಪಡೆದ ಚಿತ್ರಕಲಾ ಪ್ರದರ್ಶನವು ಮೇ 23 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ನಗರದ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವಲ್ರ್ಡ್ ಕಲ್ಚರ ನಲ್ಲಿ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ವಿಜೇತರಿಗೆ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಬೀ. ನೀಲಮ್ಮರವರು ಪತ್ರದಲ್ಲಿ ತಿಳಿಸಿದ್ದಾರೆ.

ರೆಹಮಾನ್ ಪಟೇಲ್ ಅವರು ಕಳೆದ ಎರಡು ದಶಕಗಳಿಂದ ಸುರಪುರ ಲಘುಚಿತ್ರಕಲೆ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕಲಾರೂಪವು 1773 ರಿಂದ 1858ರವರೆಗೆ ಸುರಪುರ ನಾಯಕರ ಆಳ್ವಿಕೆಯಲ್ಲಿ ಅರಳಿದಿತ್ತು.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...